ಕೆವಿಜಿ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಓಣಂ ಆಚರಣೆ

0

ಹಬ್ಬ ಎಲ್ಲರಿಗೂ ಸಂತೋಷ, ಸಮೃದ್ಧಿಯನ್ನು ತರಲಿ : ಡಾ. ಕೆ.ವಿ. ಚಿದಾನಂದ

ಓಣಂ ಹಬ್ಬ‌ ಎಲ್ಲರ ಜೀವದಲ್ಲಿ ಸುಖ, ಸಂತೋಷ, ಸಂತೋಷ, ಸಮೃಧ್ದಿ, ಆರೋಗ್ಯವನ್ನು ತರಲಿ ಎಂದು ಎಒಎಲ್ಇ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹೇಳಿದರು. ಅವರು ಸೆ. 3ರಂದು ಕೆ.ವಿ.ಜಿ. ಮೆಡಿಕಲ್ ಕಾಲೇಜು ಆವರಣದಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಕೆವಿಜಿ ಅಲೈಡ್ ಹೆಲ್ತ್ ಸೈನ್ಸಸ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋತೆರಪಿ ಹಾಗೂ ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್ ಇವುಗಳ ಒಗ್ಗೂಡುವಿಕೆಯಲ್ಲಿ ನಡೆದ ಓಣಂ ಆಚರಣೆಯನ್ನು ಉದ್ಘಾಟಿಸಿ, ಶುಭ‌ ಹಾರೈಸಿದರು.


ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಗರಿಯಿಂದ ಅಲಂಕರಿಸಲಾಗಿತ್ತು.


ಅತಿಥಿಗಳನ್ನು ಬಲಿ ಚಕ್ರವರ್ತಿ ಹಾಗೂ ವಾಮನ ವಟು ವೇಷಧಾರಿಗಳ ಜೊತೆ ಸಿಂಗಾರಿ ಮೇಳದ ಮೂಲಕ ಕರೆತರಲಾಯಿತು. ಎಒಎಲ್ಇ ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಕಾರ್ಯದರ್ಶಿ ಡಾ. ಐಶ್ವರ್ಯ ಕೆ. ಸಿ, ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಪ್ರಮುಖರಾದ ಡಾ. ಶೀಲಾ ಜಿ.ನಾಯಕ್, ಡಾ. ಗೋಪಿನಾಥ್ ಪೈ, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಪ್ರಾಂಶುಪಾಲ ಡಾ. ಪ್ರಮೋದ್ ಕೆ.ಜೆ, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಪ್ರಾಂಶುಪಾಲೆ ಡಾ. ಚಂದ್ರಾವತಿ, ಡಾ. ರಂಜಿತ್ ಕೆ.ಬಿ, ಡಾ. ಅಪೂರ್ವ ದೊರೆ ಸೇರಿದಂತೆ ವಿವಿಧ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ಆಡಳಿತಾಧಿಕಾರಿಗಳು, ವಿಭಾಗ ಮುಖ್ಯಸ್ಥರು, ಬೋದಕ ಮತ್ತು ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಿಂಗಾರಿಮೇಳ ಪ್ರದರ್ಶನ, ವಿದ್ಯಾರ್ಥಿಗಳಿಂದ ತಿರುವಾದಿರ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಓಣಂ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳು ನಡೆದು ಬಹುಮಾನ ವಿತರಿಸಲಾಯಿತು.