ಕೆ.ಎಸ್. ಹವ್ಯಾಸ್ ನವೋದಯ ವಿದ್ಯಾಲಯಕ್ಕೆ ಆಯ್ಕೆ

0

2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಕೆ ಎಸ್ ಹವ್ಯಾಸ್ ಮುಡಿಪು ಪಿಎಂಶ್ರೀ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ.

ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಕೆಮ್ಮಾರ ಶಿವರಾಮ ಗೌಡ ಮತ್ತು ವೇದಾವತಿ ದಂಪತಿಗಳ ಪುತ್ರ ಪೆರ್ಲoಪಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಕೆ ಎಸ್ ಹವ್ಯಾಸ್ ನವೋದಯಕ್ಕೆ ಆಯ್ಕೆಯಾಗಿದ್ದಾರೆ.

ಈ ಮೂಲಕ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲ್ಲಿ ತರಬೇತಿ ಪಡೆದ ಒಟ್ಟು 22 ವಿದ್ಯಾರ್ಥಿಗಳು ನವೋದಯ ಪ್ರವೇಶಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ. ಇದುವರೆಗೆ ಇಲ್ಲಿ ತರಬೇತಿ ಪಡೆದ ಒಟ್ಟು 207 ವಿದ್ಯಾರ್ಥಿಗಳು ನವೋದಯ ವಸತಿ ಶಾಲೆಗೆ ಆಯ್ಕೆಯಾಗಿದ್ದಾರೆ.

ವರದಿ : ಉಮೇಶ್ ಮಣಿಕ್ಕಾರ