೨೦೨೪- ೨೦೨೫ನೇ ಸಾಲಿನಲ್ಲಿ ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.೧೦೦ ಫಲಿತಾಂಶದ ಶೈಕ್ಷಣಿಕ ಸಾಧನೆಗಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಸನ್ಮಾನಿಸಲಾಯಿತು.
ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಮೂಡುಬಿದರೆ ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚಾರ್ಯರ ಸಂಘ ಹಾಗೂ ವಿಷಯ ಉಪನ್ಯಾಸಕರ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಾಗೂ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಇವರ ಆಶ್ರಯದಲ್ಲಿ ಸೆ. ೧೪ರಂದು ನಡೆದ ಶಿಕ್ಷಕರ ದಿನಾಚರಣೆ – ೨೦೨೫ರ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.















ಕಾಲೇಜಿನ ಪ್ರಾಂಶುಪಾಲರಾದ ಚಿದಾನಂದ.ಕೆ. , ಇತಿಹಾಸ ಉಪನ್ಯಾಸಕರಾದ ಕಲ್ಪನಾ ಕೆ.ಎಸ್, ಆಂಗ್ಲ ಉಪನ್ಯಾಸಕರಾದ ವೈಷ್ಣವಿ ಆರ್.ಎಸ್, ರಾಜ್ಯಶಾಸ್ತ್ರ ಉಪನ್ಯಾಸಕರಾದ ಉಮೇಶ್.ಎಂ, ಸಮಾಜಶಾಸ್ತ್ರ ಉಪನ್ಯಾಸಕರಾದ ವಿನಯ.ಕೆ, ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಆಶಿಕಾ. ಎ. ಹಾಗೂ ದಿವ್ಯ.ಕೆ.
ಇವರು ಸನ್ಮಾನ ಸ್ವೀಕರಿಸಿದರು.










