ಬೆಳ್ತಂಗಡಿ ಧರ್ಮಸ್ಥಳದ ಬಂಗ್ಲೆಗುಡ್ಡೆ ಕಾಡಿನಲ್ಲಿ ಎಸ್ ಐ ಟಿ ಶೋಧ ಕಾರ್ಯಾಚರಣೆಯ ಸಂದರ್ಭ ತಲೆ ಬುರುಡೆಗಳು ಮತ್ತು ಎಲುಬುಗಳು ದೊರೆತಿವೆ ಎಂಬ ಮಾಧ್ಯಮ ವರದಿಗೆ ಸಾಮಾಜಿಕ ಜಾಲತಾಣದಲ್ಲಿ ಅನಗತ್ಯ ವಾಗಿ ಧಾರ್ಮಿಕ ಭಾವನೆ ಕೆರಳಿಸುವ ಉದ್ದೇಶದಿಂದ ಕಾಮೆಂಟ್ ಮಾಡಿ ಅಶಾಂತಿ ಸೃಷ್ಟಿಸಿ ಕೋಮು ಗಲಭೆ ಹಬ್ಬುವ ಷಡ್ಯಂತ್ರ ಮಾಡಲು ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿ “ಸನಾತನಿ ಸಿಂಹ” ಫೇಸ್ಬುಕ್ ಪೇಜ್ ಹಾಗೂ ಚೇತನ್ ಹೊದ್ದೆಟ್ಟಿ ಎಂಬ ವ್ಯಕ್ತಿಯ ವಿರುದ್ಧ ಸುಳ್ಯ ಪೋಲೀಸರಿಗೆ ಮುಸ್ಲಿಂ ಯೂತ್ ಫಡೆರೇಶನ್ ಸುಳ್ಯ ತಾಲೂಕು ಸಮಿತಿಯು ದೂರು ನೀಡಿದ್ದು, ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿದೆ.















ಏನಿದು ಪ್ರಕರಣ…?
ಮಾಧ್ಯಮ ಒಂದರಲ್ಲಿ ಪ್ರಕಟವಾದ “ಬಂಗ್ಲೆಗುಡ್ಡೆ ಕಾಡಿನಲ್ಲಿ ಮುಂದುವರಿದ ಎಸ್ ಐ ಟಿ ಶೋಧ ಮತ್ತೆರಡು ತಲೆ ಬುರುಡೆ ಪತ್ತೆ” ಎಂಬ ಟೈಟಲ್ ನೊಂದಿಗೆ ಬಂದ ವರದಿಗೆ ಅದರ ಫೇಸ್ಬುಕ್ ಖಾತೆಯಲ್ಲಿ “ಸನಾತನಿ ಸಿಂಹ” ಎಂಬ ಖಾತೆಯಿಂದ ಕಮೆಂಟ್ ಹಾಕಿದ ವ್ಯಕ್ತಿ ” ಒಂದು ಪೈಗಂಬರದು ಇನ್ನೊಂದು ಆಯೇಷಾ ದು” ಎಂದು ಬರೆದಿದ್ದ ಹಾಗೂ ಅದೇ ಕಮೆಂಟ್ ಬಾಕ್ಸ್ ನಲ್ಲಿ ಚೇತನ್ ಹೊದ್ದೆಟ್ಟಿ ಎಂಬ ವ್ಯಕ್ತಿ ‘ಒಂದು ಪೈಗಂಬರ್ ಇನ್ನೊಂದು ಆಯೇಷಾದು ಇರಬಹುದು’ ಎಂದು ಕಮೆಂಟ್ ಹಾಕಿ ಧಾರ್ಮಿಕ ನಿಂದನೆ, ಅಶಾಂತಿ ಸೃಷ್ಟಿ, ಧಾರ್ಮಿಕ ಭಾವನೆ ಕೆರಳಿಸಿ ಕೋಮು ಗಲಭೆ ಮಾಡುವ ಷಡ್ಯಂತ್ರ ಮತ್ತು ಪಿತೂರಿ ನಡೆಸಿದ್ದಾರೆ ಎಂದು ಸುಳ್ಯ ಮುಸ್ಲಿಂ ಯೂತ್ ಫೆಡರೇಶನ್ ಅಧ್ಯಕ್ಷ ಉಮ್ಮರ್ ಕೆ.ಎಸ್. ಇವರ ನೇತೃತ್ವದಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಶರೀಫ್ ಕಂಠಿ, ಸಿದ್ದೀಕ್ ಕೊಕ್ಕೊ, ಉನೈಸ್ ಪೆರಾಜೆ, ಇಕ್ಬಾಲ್ ಸುಣ್ಣಮೂಲೆ, ರಶೀದ್ ಜಟ್ಟಿಪಳ್ಳ, ಮುನಾಫರ್ ಉಪಸ್ಥಿತರಿದ್ದರು.










