ಚೆಕ್ ಅಮಾನ್ಯ ಕೇಸ್ – ಕೋರ್ಟಿಗೆ ಹಾಜರಾಗದ ಆರೋಪಿಗೆ ನ್ಯಾಯಾಂಗ ಬಂಧನ

0

ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇಲ್ಲಿ ಸಾಲ ಪಡೆದಿದ್ದ ಪುತ್ತೂರು ತಾಲೂಕು ಬಿರುಮಲೆ ನಿವಾಸಿ ಪ್ರಾಥಮಿಕ ಶಾಲಾ ಶಿಕ್ಷಕ ಪುರುಷೋತ್ತಮ ಬಿ. ಎಂಬವರು ಸಾಲದ ಮರುಪಾವತಿಗಾಗಿ ಚೆಕ್ ನೀಡಿದ್ದು ಇದು ಬ್ಯಾಂಕಿನಲ್ಲಿ‌ ಸಾಕಷ್ಟು ಮೊತ್ತ ಇಲ್ಲದೆ ಅಮಾನ್ಯಗೊಂಡಿತ್ತು.

ಈ ಬಗ್ಗೆ ಸಹಕಾರಿಯವರು ಸುಳ್ಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು ಈ ಸಂಬಂಧ ಒಮ್ಮೆ ಕೋರ್ಟಿಗೆ ಹಾಜರಾಗಿದ್ದ ಆರೋಪಿಯು ಬಳಿಕ ಸಮನ್ಸ್, ವಾರಂಟ್ ಗಳಾದರೂ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.

ಆ ಹಿನ್ನೆಲೆಯಲ್ಲಿ ಅವರನ್ನು ಸೆ.19ರಂದು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದುಬಂದಿದೆ.