














ಸ್ಕ್ಯಾಡ್ಸ್ ಮಂಗಳೂರು (SKADS) ಸಂಸ್ಥೆ ವತಿಯಿಂದ ಸಂಸ್ಥೆಯೊಂದಿಗೆ ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ವ್ಯವಹಾರ ನಡೆಸಿದ ಸಹಕಾರ ಸಂಘಕ್ಕೆ ಕೊಡ ಮಾಡುವ ಪ್ರಶಸ್ತಿಯನ್ನು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೀಡಿ ಗೌರವಿಸಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲಪಾಡಿ ಅವರ ಪರವಾಗಿ ನಿರ್ದೇಶಕರಾದ ಪ್ರಮೀಳಾ ಬಂಗಾರಕೋಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ರವರು ಪ್ರಶಸ್ತಿ ಸ್ವೀಕರಿಸಿದರು. ಸ್ಕ್ಯಾಡ್ಸ್ ಮಂಗಳೂರು ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ ಕಂಬಳಿಯವರು ಹಾಗೂ ಸಂಸ್ಥೆಯ ನಿರ್ದೇಶಕರುಗಳು ಪ್ರಶಸ್ತಿ ನೀಡಿ ಗೌರವಿಸಿದರು.










