








ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಗ್ರಂಥಪಾಲಕರಾದ ಉಮೇಶ್ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.
ಇವರು ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಹಾಗೂ ವಿಭಾಗದ ಅಧ್ಯಕ್ಷ ಡಾ. ಕೆ.ಎಂ. ಖಾನ್. ಅವರ ಮಾರ್ಗದರ್ಶನದಲ್ಲಿ Resources, Facilities and Services in Pre-University College Libraries: A Study in Dakshina Kannada and Udupi Districts.” ಎಂಬ ವಿಷಯದ ಬಗ್ಗೆ ಮಹಾಪ್ರಬಂಧದವನ್ನು ಮಂಡಿಸಿ ಪ್ರತಿಷ್ಠಿತ ಪಿ.ಹೆಚ್.ಡಿ. ಪದವಿಯನ್ನು ಪಡೆದುಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಚೆನ್ನಪ್ಪ ಪೂಜಾರಿ ಮತ್ತು ಶ್ರೀಮತಿ ಕಲ್ಯಾಣಿ ದಂಪತಿಗಳ ಪುತ್ರರಾಗಿರುವ ಇವರು ಕಳೆದ 7 ವರ್ಷಗಳಿಂದ ಎನ್.ಎಂ.ಸಿ. ಯಲ್ಲಿ ಗ್ರಂಥ ಪಾಲಕರಾಗಿರುವ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ವರ್ಗ, ವಿದ್ಯಾರ್ಥಿ ವೃಂದ ಹಾಗೂ ಬೋಧನೆಕೇತರ ಸಿಬ್ಬಂದಿಗಳು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.










