ವೈದ್ಯಕೀಯ ತುರ್ತು ಪರಿಸ್ಥಿತಿ ಮತ್ತು ತುರ್ತು ಸಂದರ್ಭದಲ್ಲಿ ಚುಚ್ಚುಮದ್ದು ನೀಡುವ ವಿಧಾನದ ಬಗ್ಗೆ ವಿಚಾರ ಸಂಕಿರಣ









ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಬಾಯಿ, ಮುಖಮತ್ತು ದವಡೆ ಶಸ್ತ್ರಚಿಕಿತ್ಸಾ ವಿಭಾಗದ ವತಿಯಿಂದ ವೈದ್ಯಕೀಯ ತುರ್ತು ಪರಿಸ್ಥಿತಿ ಮತ್ತು ತುರ್ತು ಸಂದರ್ಭದಲ್ಲಿ ಚುಚ್ಚುಮದ್ದು ನೀಡುವ ವಿಧಾನದ ಬಗ್ಗೆ ವಿಚಾರ ಸಂಕಿರಣವನ್ನು ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಸಭಾಂಗಣದಲ್ಲಿ ಅ. ೯ರಂದು ನಡೆಸಲಾಯಿತು.
ಬಾಯಿ, ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಾ ವಿಭಾಗ ಮುಖ್ಯಸ್ಥರಾದ ಡಾ. ಪ್ರಸನ್ನ ಕುಮಾರ್ ಡಿ. ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಮೋಕ್ಷಾ ನಾಯಕ್ರವರು ಉದ್ಘಾಟಿಸಿ ವಿಚಾರ ಸಂಕಿರಣದ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು.
ದಿನಪೂರ್ತಿ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಡಾ. ನಾರಾಯಣ ಹೊಳ್ಳ ಹಾಗೂ ಎಸ್.ವಿ.ಎಮ್. ಅಸ್ಪತ್ರೆ, ಸುಳ್ಯದ ಡಾ. ಗಣೇಶ್ ಶರ್ಮರವರು ಮಾಹಿತಿ, ತರಬೇತಿ ನೀಡಿದರು.
ಬಾಯಿ, ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರಾದ ಡಾ. ಮಹಾಬಲೇಶ್ವರ ಸಿ.ಎಚ್. ರವರು ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಡಾ. ದಿಬಾಕರ್ ಸೂತ್ರಧಾರ್ ವಂದನಾರ್ಪಣೆ ಮಾಡಿದರು. ಈ ಸಂಧರ್ಭದಲ್ಲಿ ಉಪಪ್ರಾಂಶುಪಾಲರಾದ ಡಾ. ಶೈಲಜಾ ಪೈ, ಡಾ. ಮನೋಜ್ ಕುಮಾರ್ ಅಡ್ಯಂತಡ್ಕ, ಡಾ. ರೇವಂತ್ ಸೂಂತೋಡು ಮತ್ತು ವಿಭಾಗ ಮುಖ್ಯಸ್ಥರು, ಆಡಲಿತಾಧಿಕಾರಿ ಬಿ.ಟಿ. ಮಾಧವ, ಬೋಧಕ, ಬೋಧಕೇತರ ಸಿಬ್ಭಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಚುಚ್ಚುಮದ್ದು ನೀಡುವ ವಿವಿಧ ವಿಧಾನಗಳ ಬಗ್ಗೆ ಪ್ರಾತ್ಯಕ್ಷತೆ ನೀಡಲಾಯಿತು. ತದಾನಂತರ ವಿದ್ಯಾರ್ಥಿಗಳು ಚುಚ್ಚುಮದ್ದು ನೀಡುವ ವಿವಿಧ ವಿಧಾನಗಳನ್ನು ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಅಭ್ಯಸಿಸಿದರು. ಒಟ್ಟು ೧೦೦ ಹೌಸ್ ಸರ್ಜನ್ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.










