ದ.ಕ ಜಿಲ್ಲಾ ಸಮಿತಿ ಸಹ ಸಂಚಾಲಕರಾಗಿ ಹಸೈನಾರ್ ಜಯನಗರ, ಸುಳ್ಯ ತಾಲೂಕು ಸಮಿತಿ ಸಂಚಾಲಕರಾಗಿ ಶಂಕರ್ ಪೆರಾಜೆ ಆಯ್ಕೆ
2025ನೇ ಸಾಲಿನ ಮಕ್ಕಳ ಹಕ್ಕುಗಳ ಮಾಸೋತ್ಸವದ ಪೂರ್ವಭಾವಿ ಸಭೆ ಮತ್ತು ಕೆ.ಟಿ.ಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ಸಭೆ ಮಂಗಳೂರು ಪಡಿ ಸಂಸ್ಥೆಯಲ್ಲಿ ಅಕ್ಟೋಬರ್ 16 ರಂದು ನಡೆಯಿತು.
ಜಿಲ್ಲೆಯಾದ್ಯಂತ ಮೂರು ತಿಂಗಳು ಸರಣಿ ಕಾರ್ಯಕ್ರಮ ದೊಂದಿಗೆ ಆಯೋಜಿಸಲ್ಪಡುವ ಮಕ್ಕಳ ಹಕ್ಕುಗಳ ಮಾಸೋತ್ಸವವನ್ನು ಯಶಸ್ವಿಯಾಗಿ ನಡೆಸುವ ಬಗ್ಗೆ ಮತ್ತು ಕಾರ್ಯ ಚಟುವಟಿಕೆಗಳ ಬಗ್ಗೆ ಪಡಿ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ರೆನ್ನಿ ಡಿಸೋಜ ರವರು ಮಾಹಿತಿ ಕಾರ್ಯಗಾರ ನಡೆಸಿದರು. ಸಂಪನ್ಮೂಲ ವ್ಯಕ್ತಿ ಶ್ರೀಮತಿ ಕಸ್ತೂರಿ ಬೊಳುವಾರು ರವರು ಮಾಸೋತ್ಸವದ ಉದ್ದೇಶ ಹಾಗೂ ಅದರ ಜವಾಬ್ದಾರಿಯನ್ನು ಕುರಿತು ಮಾಹಿತಿ ನೀಡಿದರು.















ಬಳಿಕ 25-26 ನೇ ಸಾಲಿನ ನೂತನ ಸಮಿತಿ ರಚಿಸಲಾಯಿತು. ಜಿಲ್ಲಾ ಸಮಿತಿಯಲ್ಲಿ ಸಹ ಸಂಚಾಲಕರಾಗಿ ಹಸೈನಾರ್ ಜಯನಗರ, ಸದಸ್ಯರಾಗಿ ಸುಳ್ಯ ತಾಲೂಕು ಸಮಿತಿಯ ತರಬೇತುದಾರ ನಾರಾಯಣ ಕಿಲಂಗೋಡಿ ಹಾಗೂ ಸುಳ್ಯ ತಾಲೂಕು ಸಮಿತಿಯ ಸಂಚಾಲಕರಾಗಿ ಶಂಕರ್ ಪೆರಾಜೆ ಅವರನ್ನು ಆಯ್ಕೆ ಮಾಡಲಾಯಿತು.
ಜಿಲ್ಲಾ ಸಮಿತಿಯ ಸಂಚಾಲಕರಾಗಿ ರಫೀಕ್ ದರ್ಬೆ, ಉಪ ಸಂಚಾಲಕರಾಗಿ ಶ್ರೀಮತಿ ಸುಮಂಗಲ ಶೆಣೈ ರವರು ಆಯ್ಕೆಯಾದರು. ಮಂಗಳೂರು, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಪದಾಧಿಕಾರಿಗಳನ್ನು ಸಹ ಸಂಚಾಲಕರಾಗಿ ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ತಾಲೂಕು ಸಮಿತಿ ಯ ಅಧ್ಯಕ್ಷರು, ಪದಾಧಿಕಾರಿಗಳು, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಭಾಗವಹಿಸಿದ್ದರು.










