














ಕನ್ನಡ ರಾಜ್ಯೋತ್ಸವವನ್ನು ಜಾತಿ, ಮತ, ಪಕ್ಷ ಭೇದ ಮರೆತು ಆಚರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಸುಳ್ಯದ ಶಾಸಕರಾದ ಕು. ಭಾಗೀರಥಿ ಮುರುಳ್ಯರವರು ಇಂದು ಸಮಯಕ್ಕೆ ಸರಿಯಾಗಿ ಬಾರದೆ, ಮಕ್ಕಳನ್ನು ಅಧಿಕಾರಿಗಳನ್ನು ಕಾಯಿಸುವುದರ ಮೂಲಕ ಜಾವಾಬ್ದಾರಿ ಇಲ್ಲದವರಂತೆ ವರ್ತಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಧ್ವಜಾರೋಹಣ ನೇರವೇರಿಸಿದೆ, ತಡವಾಗಿ ಕಾರ್ಯಕ್ರಮಕ್ಕೆ ಬರುವುದರ ಮೂಲಕ ಮಕ್ಕಳನ್ನು ಬಿಸಿಲಲ್ಲಿ ಕಾಯಿಸಿದ್ದಾರೆ. ಇದು ಖಂಡನೀಯ. ಇದೇ ರೀತಿಯ ಬೇಜಾವಬ್ದಾರಿ ವರ್ತನೆಯಿಂದ ಸುಳ್ಯ ಅಭಿವೃದ್ಧಿಯಲ್ಲಿಯೂ ಹಿಂದೆ ಉಳಿದಿದೆ. ಈ ರೀತಿಯ ವ್ಯವಸ್ಥೆಯನ್ನು ಎನ್ ಎಸ್ ಯು ಐ ತೀವ್ರವಾಗಿ ಖಂಡಿಸುತ್ತದೆ ಎಂದು – ಎನ್ ಯು ಎಸ್ ಐ ಜಿಲ್ಲಾ ಉಪಾಧ್ಯಕ್ಷ ಕೀರ್ತನ್ ಕೊಡಪಾಲ ಹೇಳಿದ್ದಾರೆ.










