“ಇದು ಪುಣ್ಯದ ಕ್ಷೇತ್ರ ,ನೀವು ಭಾಗ್ಯವಂತರು: ಕೋಡಿ ಶ್ರೀಗಳು
ಕರಿಕ್ಕಳ, ಎಣ್ಮೂರು-ಐವತ್ತೊಕ್ಲು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನ. 05 ರಂದು ಶ್ರೀಮಹಾವಿಷ್ಣು ಮಹಾಯಾಗ ನಡೆಯಿತು . ಅರಸೀಕೆರೆ ಕೋಡಿಮಠ ಮಹಾಸಂಸ್ಥಾನದ ಮಹಾಸ್ವಾಮೀಜಿ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಆಶೀರ್ವಚನ ನೀಡಿ. “ಇದು ಮೂಡ ನಂಬಿಕೆಗಳಲ್ಲ ಮೂಲ ನಂಬಿಕೆಗಳು. ಹೋಮ ಯಜ್ಞ ಅಗಾದಿಗಳಿಗೆ ವೈಜ್ಞಾನಿಕ ವಿವರಣೆಗಳಿವೆ.
ಇದರಿಂದ ಮಣ್ಣು, ಬೆಳೆ, ನಾಡು ಸಮೃದ್ಧಿಯಾಗುತ್ತದೆ. ಐದು ನೂರು ವರ್ಷಗಳ ಹಿಂದೆ ಇಲ್ಲಿಂದ ಹೋಗಿದ್ದ ನಿಮ್ಮ ದೇವರು ಮತ್ತೆ ನಿಮ್ಮ ಊರಿಗೇ ಬಂದಿದ್ದಾರೆ. ನೀವು ಎಲ್ಲರೂ ಭಾಗ್ಯವಂತರು. ಇದು ಪುಣ್ಯದ ಮಣ್ಣು. ” ಎಂದು ಹೇಳಿದರು.

ಮಹಾಯಾಗ ಸಮಿತಿಯ ಅಧ್ಯಕ್ಷ ಡಾ.ರವಿ ಕಕ್ಕೆಪದವು ಕುಕ್ಕೆ ಸುಬ್ರಹ್ಮಣ್ಯ, ಪ್ರಧಾನ ಕಾರ್ಯದರ್ಶಿ ಮತ್ತು ದೇವಳದ ಟ್ರಸ್ಟ್ ನ ಅಧ್ಯಕ್ಷ ಚಂದ್ರಪ್ರಕಾಶ್ ಕಂಬಳ , ಮಹಾಯಾಗ ಸಮಿತಿಯ ಗೌರವಾಧ್ಯಕ್ಷ ಅಕ್ಷಯ್ ಕೆ.ಸಿ. ಕುರುಂಜಿ ಸುಳ್ಯ, ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷ ನೇಮಿರಾಜ ಪಲ್ಲೋಡಿ, ಮಹಾಯಾಗ ಸಮಿತಿಯ ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಡಾ.ದೇವಿಪ್ರಸಾದ್ ಕಾನತ್ತೂರ್, ದೇವಳದ ಪ್ರಧಾನ ಅರ್ಚಕ ಅಕ್ಷಯ್ ಬರ್ಲಾಯಬೆಟ್ಟು ಮಹಾಯಾಗ ಸಮಿತಿಯ ಖಜಾಂಜಿ ಪ್ರಶಾಂತ್
















ಅಲೆಂಗಾರ, ಸಂಚಾಲಕ ವಿ.ಜೆ. ವಿಖ್ಯಾತ್, ಸಹ ಸಂಚಾಲಕ ಪುರುಷೋತ್ತಮ ಕೋಲ್ಪೆ , ಜತೆ ಕಾರ್ಯದರ್ಶಿ ಶ್ರೀಮತಿ ನಳಿನಾಕ್ಷಿ ಯಂ. ಪಂಜ, ಪುನರ್ ನಿರ್ಮಾಣ ಸಮಿತಿ ಕಾರ್ಯದರ್ಶಿ ಕುಸುಮಾಧರ ಕರಿಮಜಲು, ಆಡಳಿತ ಮಂಡಳಿ ಟ್ರಸ್ಟ್ ಕಾರ್ಯದರ್ಶಿ ಗುರುಪ್ರಸಾದ್ ತೋಟ, ಮಹಾಯಾಗ ಸಮಿತಿಯ ಪದಾಧಿಕಾರಿಗಳು, ಪುನರ್ ನಿರ್ಮಾಣ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದು ಸ್ವಾಮೀಜಿಯವರ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು.

ಲೋಕ ಕಲ್ಯಾಣಾರ್ಥವಾಗಿ ಹಾಗೂ 2026ನೇ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಶ್ರೀ ದೇವರ ಪುನಃಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ನೂತನ ದೇವಾಲಯದ ಲೋಕಾರ್ಪಣೆಯ ಪೂರ್ವಭಾವಿಯಾಗಿ, ಅರಸೀಕೆರೆ ಕೋಡಿಮಠ ಮಹಾಸಂಸ್ಥಾನದ ಮಹಾಸ್ವಾಮೀಜಿ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ, ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇ। ಮೂ। ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಊರ ಹಾಗೂ ಪರವೂರ ಭಗವದ್ಭಕ್ತರ ಸಹಕಾರದೊಂದಿಗೆ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ವೇ। ಮೂ। ಅಕ್ಷಯ ಭಟ್ ಬರ್ಲಾಯಬೆಟ್ಟು ಇವರ ಪೌರೋಹಿತ್ಯದಲ್ಲಿ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀಮಹಾವಿಷ್ಣು ಮಹಾಯಾಗ ಜರುಗಿತು.

ಬೆಳಿಗ್ಗೆ ಶ್ರೀ ಮಹಾವಿಷ್ಣು ಮಹಾಯಾಗ ಪ್ರಾರಂಭ , ಮಧ್ಯಾಹ್ನ ಮಹಾಯಾಗದ ಪೂರ್ಣಾಹುತಿ, ಅಷ್ಟಾವಧಾನ ಸೇವೆ, ಮಹಾಪೂಜೆ, ಪ್ರಸಾದ ಭೋಜನ ನಡೆಯಿತು.










