
ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಮರಾಟಿ ಸಮಾಜ ಬಾಂಧವರಿಗೆ ವಾರ್ಷಿಕ ಕ್ರೀಡಾಕೂಟ ನ.9 ರಂದು ಗಿರಿದರ್ಶಿನಿ ಸಭಾಭವನದ ವಠಾರದಲ್ಲಿ ನಡೆಯಿತು.
















ಸಭೆಯ ಅಧ್ಯಕ್ಷತೆಯನ್ನು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ್ ಅಜ್ಜಾವರ ವಹಿಸಿದ್ದರು. ಪುತ್ತೂರು ತಾ. ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕರುಣಾಕರ ಪಾಂಗಲಾಯಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ಸೈಂಟ್ ಜೋಸೆಫ್ ಶಾಲೆಯ ದೈ.ಶಿ.ಶಿಕ್ಷಕ ಕೊರಗಪ್ಪ ಕುರುಂಬುಡೇಲು, ಕೊಡಗು ಬಾಳೆಲೆ ವಿಜಯಲಕ್ಷ್ಮಿ ಅನುದಾನಿತ ಪ್ರೌಢಶಾಲೆಯ ಸಹಶಿಕ್ಷಕ ಸುಬ್ಬಯ್ಯ ಡಿ.ಎನ್.ಭಾಗವಹಿಸಿದ್ದರು.ವೇದಿಕೆಯಲ್ಲಿ ಮರಾಟಿ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಜನಾರ್ದನ ಬಿ.ಕುರುಂಜಿಭಾಗ್, ಧಾರ್ಮಿಕ ಚಿಂತನಾ ಸಮಿತಿ ಅಧ್ಯಕ್ಷ ಗೋಪಾಲ ನಾಯ್ಕ್ ದೊಡ್ಡೇರಿ , ಮರಾಟಿ ಮಹಿಳಾ ವೇದಿಕೆಯ ಅಧ್ಯಕ್ಷೆ ರೇವತಿ ದೊಡ್ಡೇರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗಾಯಕ ಸುಭಾಷ್ ಡಿ.ಕೆ.ಪ್ರಾರ್ಥಿಸಿದರು. ಮರಾಟಿ ಸಮಾಜ ಸೇವಾ ಸಂಘದ ಕಾರ್ಯಕಾರಿ ಸದಸ್ಯರಾದ ಈಶ್ವರ ವಾರಣಾಶಿ ಸ್ವಾಗತಿಸಿ, ಭವಾನಿಶಂಕರ ಕಲ್ಮಡ್ಕ ವಂದಿಸಿದರು. ಪ್ರ.ಕಾರ್ಯದರ್ಶಿ ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಸಮಾಜ ಬಾಂಧವರಿಗೆ ವಿವಿಧ ಕ್ರೀಡಾ ಮತ್ತು ಮನೋರಂಜನಾ ಸ್ಪರ್ಧೆ ನಡೆಯಿತು.










