ರಾಷ್ಟ್ರ ಮಟ್ಟದಲ್ಲಿ ವಿದ್ಯಾರ್ಥಿಗಳು ವಿಜೇತರಾಗಿ: ಶಾಸಕಿ ಕು.ಭಾಗೀರಥಿ ಮುರುಳ್ಯ
ಕರ್ನಾಟಕ ಸರಕಾರ,ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜು ಪಂಜ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ಮತ್ತು 17 ವಯೋಮಾನದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ 2025-26 ನ.12 ಮತ್ತು ನ.13 ಪಂಜ ಸರಕಾರಿ ಪದವಿ ಪೂರ್ವ ಕಾಲೇಜು ಕೋಟಿ ಚೆನ್ನಯ್ಯ ಕ್ರೀಡಾಂಗಣದಲ್ಲಿ ನಡೆಯಲಿದನ. 12 ರಂದು ಉದ್ಘಾಟನೆ ಗೊಂಡಿತು.

ಸಭಾಧ್ಯಕ್ಷತೆ ವಹಿಸಿ ಶಾಸಕಿ ಕು.ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಪಂಜ ಪೈಂದೋಡಿ ಶ್ರೀ ಸುಬ್ರಾಯ ಸ್ವಾಮಿ ದೇವಳದಿಂದ ವಿದ್ಯಾರ್ಥಿಗಳು ತಂದ ಕ್ರೀಡಾ ಜ್ಯೋತಿಯಿಂದ ದೀಪ ಬೆಳಗಿಸಿದರು.

ಬಳಿಕ ಅವರು ಮಾತನಾಡಿ “ಇಲ್ಲಿನ ಕ್ರೀಡಾ ಪಟುಗಳು ನಮ್ಮ ಜಿಲ್ಲೆಯವರು ಎಂಬ ಮನಸ್ಥಿತಿ ಎಲ್ಲರಲ್ಲೂ ಇರಬೇಕು. ಇಲ್ಲಿ ವಿಜೇತ ವಿದ್ಯಾರ್ಥಿಗಳು ಮುಂದೆ ರಾಷ್ಟ್ರ ಮಟ್ಟದಲ್ಲಿ ವಿಜೇತರಾಗಿ ಕೀರ್ತಿ ಗಳಿಸಿ “. ಎಂದು ಹೇಳಿದರು.
















ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ,ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು ಕೆ, ಸುಳ್ಯ ನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಸ್ತಫಾ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ನಿತೀನ್ ಪ್ರಭು, ಕ್ರೀಡಾ ಕೂಟ ಅಯೋಜನಾ ಸಮಿತಿ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ಲು, ತಾಲೂಕು ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಗಫೂರ್, ಲಯನ್ಸ್ ಕ್ಲಬ್ ಅಧ್ಯಕ್ಷ ನಾಗೇಶ್ ಕಿನ್ನಿಕುಮೇರಿ, ಸುಳ್ಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ಪಂಜ ಸರಕಾರಿ ಪದವಿ ಪೂರ್ವ ಕಾಲೇಜುನ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ಲು, ನಿವೃತ್ತ ಯುವ ಜನ ಕ್ರೀಡಾಧಿಕಾರಿ ಮಾಧವ ಬಿ ಕೆ, ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ರಾಧಾಕೃಷ್ಣ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದೊಡ್ಡಣ್ಣ ಬರೆಮೇಲು, ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ, ಪಂಜ ಸರಕಾರಿ ಪದವಿ ಪೂರ್ವ ಜೂನಿಯರ್ ಕಾಲೇಜು ಪ್ರಾಂಶುಪಾಲ ಚಿದಾನಂದ ಕೆ, ಮುಖ್ಯ ಶಿಕ್ಷಕ ದೇವಿಪ್ರಸಾದ್, ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ ಬಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸವಿತಾರ ಮುಡೂರು ಸೇರಿದಂತೆ ಅನೇಕ ಗಣ್ಯರು, ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ: ಪಂಜ ಸರಕಾರಿ ಪದವಿ ಪೂರ್ವ ಕಾಲೇಜುನ ನಿವೃತ್ತ ಪ್ರಶಸ್ತಿ ವಿಜೇತ ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ಲು ಮತ್ತು ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ರಾಧಾಕೃಷ್ಣ ರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಅರಂತೋಡು ಸ.ಹಿ.ಪ್ರಾ.ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಧನಂಜಯ ಪಥ ಸಂಚಲನ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು ಕೆ ಸ್ವಾಗತಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸೋಮಶೇಖರ ನೇರಳ ನಿರೂಪಿಸಿದರು.ಮುಖ್ಯ ಶಿಕ್ಷಕ ದೇವಿಪ್ರಸಾದ್ ವಂದಿಸಿದರು.










