ಸುಳ್ಯ ಪೊಲೀಸರಿಂದ ಲಾರಿ ಹಾಗೂ ಕಲ್ಲುಗಳ ವಶ,ಪ್ರಕರಣ ದಾಖಲು
ಪರವಾನಿಗೆ ಇಲ್ಲದೆ ಕೇರಳ ಕಡೆಯಿಂದ ಮಡಿಕೇರಿಯತ್ತ ಈಚರ್ ವಾಹನದಲ್ಲಿ ಸಾಗಿಸುತ್ತಿದ್ದ ಕೆಂಪು ಕಲ್ಲುಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನವಂಬರ್ 20ರಂದು ರಾತ್ರಿ ನಡೆದಿದೆ.















ವಾಹನ ಸಂಖ್ಯೆ ಕೆ ಎ 21 ಸಿ 7931ನಂಬರ್ ಈಚರ್ ವಾಹನದಲ್ಲಿ ಕೇರಳದ ಮಿಂಚಿನ ಪದವು ಎಂಬಲ್ಲಿಂದ ಸುಮಾರು 400 ಕೆಂಪು ಕಲ್ಲುಗಳನ್ನು ಪರವಾನಿಗೆ ಇಲ್ಲದೆ ಕೊಂಡೋಗುತ್ತಿದ್ದು ಕಲ್ಲುಗುಂಡಿ ಹೊರ ಠಾಣೆಯ ಬಳಿ ರಾತ್ರಿ ಸುಮಾರು 11.15 ರ ವೇಳೆಗೆ ಪೊಲೀಸರು ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭ ಕಲ್ಲು ಸಾಗಾಟಕ್ಕೆ ಪರವಾನಿಗೆ ಇಲ್ಲದೇ ಇರುವ ಬಗ್ಗೆ ತಿಳಿದುಬಂದಿದ್ದು ಅವರು ಕೂಡಲೇ ಸುಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ಸುಳ್ಯ ಪೊಲೀಸ್ ಠಾಣೆಯ ಎಸ್ ಐ ಶ್ರೀಮತಿ ಸರಸ್ವತಿ ಬಿ ಟಿ ರವರು ಸ್ಥಳಕ್ಕೆ ತೆರಳಿ ವಿಚಾರಿಸಿದ್ದು, ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುವ ಬಗ್ಗೆ ತಿಳಿದುಬಂದಿದ್ದು ಅವರು ಕೂಡಲೇ ಲಾರಿ ಹಾಗೂ ಕಲ್ಲನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಳಿಕ ಲಾರಿ ಚಾಲಕ ಸೈಯದ್ ಹಾಗೂ ವಾಹನದ ಮಾಲಕ ಶೇಷಪ್ಪ ಪೂಜಾರಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.
ಕಾರ್ಯಚರಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಉದಯಕುಮಾರ್ ಹಾಗೂ ಕಾಂಸ್ಟೆಬಲ್ ಪ್ರಕಾಶ್ ಹಾಗೂ ಸೋಮಶೇಖರ್ ರವರು ಭಾಗವಹಿಸಿದ್ದರು.










