ಕೊಲ್ಲಮೊಗ್ರು: ಜಾಗ ವಿವಾದ ಹಲ್ಲೆ, ಪ್ರಕರಣ ದಾಖಲು

0

ಕೊಲ್ಲಮೊಗ್ರ ಗ್ರಾಮದ ಶಿವಾಲ ಎಂಬಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವರಿಗೆ ಕತ್ತಿಯಿಂದ ಹಲ್ಲೆ ನಡೆಸಿ ಸುಬ್ರಹ್ಮಣ್ಯ ಠಾಣೆಯಲ್ಲಿ ಕೇಸು ದಾಖಲಾದ ಘಟನೆ ನ.19 ರಂದು ವರದಿಯಾಗಿದೆ.

ಕೊಲ್ಲಮೊಗ್ರ ಗ್ರಾಮದ ಶಿವಾಲ ವಿಶ್ವನಾಥ ರೈ ಹಾಗೂ ಭರತ್ ಶಿವಾಲ ಎಂಬವರಿಗೆ ಹಲವು ಸಮಯಗಳಿಂದ ಜಾಗದ ತಕರಾರು ನಡೆಯುತ್ತಿತ್ತು. ನ.17 ರಂದು ಭರತ್‌ ಶಿವಾಲ ರಸ್ತೆಯನ್ನು ಅಗಲೀಕರಣಗೊಳಿಸಿದ್ದರನ್ನಾಲಾಗಿದೆ. ನ.19 ರಂದು ವಿಶ್ವನಾಥ ರೈ ಅವರು ತನ್ನ ಜಾಗಕ್ಕೆ ಬೇಲಿ ಹಾಕುತ್ತಿದ್ದಾಗ ಮತ್ತೆ ವಿವಾದ ಉಂಟಾಗಿದೆ. ಬೇಲಿ ತೆಗೆಯಲು ವಿಚಾರದಲ್ಲಿ ಜಗಳವಾಗಿ ವಿಶ್ವನಾಥ ರೈ ಅವರ ಎಡ ಕಿವಿ ಹಾಗೂ ಎಡ ಕೈ ಭಾಗಕ್ಕೆ ಭರತ್ ಕತ್ತಿಯಿಂದ ಕಡಿದು ಗಾಯಗೊಳಿಸಿದರೆಂದು, ಬಳಿಕ ಕೊಲ್ಲಮೊಗ್ರು ಪ್ರಾಥಮಿಕ ಆರಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಸುಳ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.