ವೆಟರನ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ (ರಿ.) ಮತ್ತು ಬಳ್ಳಾರಿ ವೆಟರನ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ (ರಿ.) ಇವರು ನಡೆಸಿರುವ 45ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟವು ನ.22 ಮತ್ತು ನ.23ರಂದು ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದ್ದು, ಪ್ರವೀಣ ಕುಮಾರ ಪವಿತ್ರ ಮಜಲು ಭಾಗವಹಿಸಿದ್ದು ಗುಂಡು ಎಸೆತದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ಪ್ರಥಮ ಮತ್ತು ಹ್ಯಾಮರ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
















ಇವರು ದಿ. ದೇವಪ್ಪ ಗೌಡ ಮಾಸ್ತರ್ ಪವಿತ್ರಮಜಲು ಇವರ ಪುತ್ರರಾಗಿದ್ದು, ಡಿಸೆಂಬರ್ ತಿಂಗಳಲ್ಲಿ ತಮಿಳುನಾಡಿನಲ್ಲಿ ನಡೆಯಲಿರುವ ದಕ್ಷಿಣ ಭಾರತ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.










