ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಧನುಪೂಜೆಯು ಡಿ.16 ರಿಂದ ಜ.14ರವರೆಗೆ ನಡೆಯಲಿದೆ.















ಪುರಾಣ ಪ್ರಸಿದ್ದ ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಅನೇಕ ಜೀರ್ಣೋದ್ಧಾರ ಕಾಮಗಾರಿಗಳು ಯಶಸ್ವಿಯಾಗಿ ಪೂರೈಸಿದ್ದು, ಕಳೆದ 2017ರ ಮಾರ್ಚ್ 1ರಿಂದ 11ರ ತನಕ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರುಗಿರುತ್ತದೆ.ಶ್ರೀ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಶ್ರೀ ದೇವಳದಲ್ಲಿ ಈ ಹಿಂದೆ ನಡೆಯುತ್ತಿದ್ದ ಕೆಲವೊಂದು ಪೂಜಾ ವಿಧಿವಿಧಾನಗಳು ನಿಂತಿರುವ ಬಗ್ಗೆ ತಿಳಿದುಕೊಂಡು ಅವುಗಳ ಪೈಕ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿದ್ದ “ಧನುಪೂಜೆ”ಯನ್ನು ಕಳೆದ ಹದಿನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ನೆರವೇರಿಸಿಕೊಂಡು ಬಂದಿರುತ್ತದೆ. ವರ್ಷದಿಂದ ವರ್ಷಕ್ಕೆ ಈ ಧನುಪೂಜೆಯಲ್ಲಿ ಪಾಲ್ಗೊಳ್ಳುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಿದೆ.
ಶ್ರೀ ಕ್ಷೇತ್ರ ತೊಡಿಕಾನದಲ್ಲಿ ನೂರಾರು ವರ್ಷಗಳ ಹಿಂದಿನ ದಾಖಲೆಗಳ ಪ್ರಕಾರ ಧನುಮಾಸದಲ್ಲಿ ಧನುಪೂಜೆಗಳು ನಡೆದ ಬಗ್ಗೆ ಮಾಹಿತಿ ಇದೆ. ಆ ಪ್ರಕಾರ ಈ ವರ್ಷದ ಡಿಸೆಂಬರ್ ತಿಂಗಳ 16ರಿಂದ, 2026 ಜನವರಿ 14ರವರೆಗೆ ಈ ವಿಶೇಷ ಧನುಪೂಜೆ ನಡೆಯಲಿದೆ. ಸುಳ್ಯ ಸೀಮೆಗೆ ಸಂಬಂಧಪಟ್ಟ ಎಲ್ಲಾ ಭಕ್ತಾಧಿಗಳು ಈ ವಿಶೇಷ ಪೂಜೆಯಲ್ಲಿ ಭಾಗಿಗಳಾಗಿ ದೇವರ ಸಂತೃಪ್ತಿ ಹಾಗೂ ಭಕ್ತ ಜನರ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವಂತೆ ವಿನಂತಿಸಿಕೊಳ್ಳುತ್ತಿದ್ದೇವೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಸೇವೆ ಮಾಡಲು ಇಚ್ಚಿಸುವ ಭಕ್ತಾಧಿಗಳು ಶ್ರೀ ದೇವಳದ ಕಚೇರಿಯನ್ನು ಸಂಪರ್ಕಿಸಬೇಕೆಂದು ದೇವಳದ ಪ್ರಕಟಣೆ ತಿಳಿಸಿದೆ.
ಧನುಮಾಸದ ದಿವಸದಲ್ಲಿ ವಿಶೇಷವಾಗಿ ಧನುಪೂಜೆ ಮಾಡಿಸುವವರು ರೂ. 500-00 ತೆತ್ತು ತಮಗೆ ಬೇಕಾದ ದಿವಸವನ್ನು ಮುಂಚಿತವಾಗಿ ದೇವಳದ ಕಛೇರಿ ಸಮಯದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಕುಟುಂಬ ಸಮೇತರಾಗಿ ಪೂಜೆಯಲ್ಲಿ ಹಾಜರಾಗಬೇಕು. ಧನುಪೂಜೆಯಲ್ಲಿ ಭಾಗಿಗಳಾಗುವವರು ಕುಟುಂಬ ಸಮೇತರಾಗಿ ಶುಚಿರ್ಭೂತರಾಗಿ ಮುಂಜಾನೆ 4-45 ಗಂಟೆ ಮೊದಲೇ ಹಾಜರಾಗಬೇಕು.ಶ್ರೀ ದೇವಳದಲ್ಲಿ ಮಾಮೂಲಿನಂತೆ ಜರಗುವ ಎಲ್ಲಾ ಸೇವೆಗಳೂ ನಡೆಯುವುದಲ್ಲದೆ ಧನುಪೂಜೆ ಪೂರ್ವಾಹ್ನ 5-00 ಗಂಟೆಗೆ ಜರಗುವುದು. ಧನುಪೂಜೆಯ ಎಲ್ಲಾ ದಿನಗಳಲ್ಲಿ ಸೀಮೆಯ ಭಜನಾ ತಂಡಗಳಿಂದ ಪೂರ್ವಾಹ್ನ ಗಂಟೆ 4-00ಕ್ಕೆ ಭಜನಾ ಸೇವೆ ಜರುಗುವುದು.ಎಂದು ತಿಳಿಸಲಾಗಿದೆ.










