ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 10 ದಿನದ ಸಂಸ್ಕೃತ ಸಂಭಾಷಣಾ ಶಿಬಿರದ ಉದ್ಘಾಟನೆಯು ಡಿ. 08 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ ವಿ ಯವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
















ಈ ಶಿಬಿರವನ್ನು ಸಂಸ್ಕೃತ ಭಾರತೀ ಕಾಸರಗೋಡು ಮಂಗಳೂರು ಗ್ರಾಮಾಂತರ ವಿಭಾಗದ ಪ್ರಶಿಕ್ಷಕಿ ಶ್ರೀಮತಿ ಸಂಧ್ಯಾ ಕುಮಾರಿ ಕುಂಟಾರು ಇವರು ಪ್ರಥಮ ವರ್ಷದ ಬಿ ಎ ಎಂ ಎಸ್ ವಿಧ್ಯಾರ್ಥಿಗಳಿಗೆ ನಡೆಸಿಕೊಟ್ಟರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಕು. ಕೇತನ ಆಚಾರ್ ಸ್ವಾಗತಿಸಿ, ಕು. ತನ್ವಿ ಬನ್ಸ್ಖೋ ವಂದಿಸಿ, ಕು. ಅನುಶ್ರೀ ಐ ಕೆ ಮತ್ತು ಬಳಗ ಪ್ರಾರ್ಥಿಸಿ, ಸಮರ್ಥ ಅರಳಿ ಹಾಗೂ ಕು. ಸನ್ನಿಧಿ ಎನ್ ನಿರೂಪಿಸಿದರು.
ಈ ಸಂಧರ್ಭದಲ್ಲಿ ಕಾಲೇಜಿನ ಅಕಾಡೆಮಿಕ್ ಕೊ ಆರ್ಡಿನೇಟರ್ ಡಾ ಕವಿತಾ ಬಿ ಎಂ, ಸಂಹಿತ ಸಿದ್ಧಾಂತ ವಿಭಾಗದ ಮುಖ್ಯಸ್ಥೆ ಡಾ. ಶ್ರೀಜ ಎಸ್, ಸಂಸ್ಕೃತ ಉಪನ್ಯಾಸಕರಾದ ಶ್ರೀಮತಿ ಶಶಿಕಲಾ ದೇರ್ಲ, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.










