ಪಂಜ: ನಾಯರ್ ಕೆರೆಯಲ್ಲಿ ನಾಗದೇವರ ಪ್ರತಿಷ್ಠೆ

0

ಪಂಜದ ಅಳ್ಪೆ ನಾಯರ್ ಕೆರೆ ಕುಟುಂಬದ ನಾಗನಕಟ್ಟೆಯಲ್ಲಿ ನಾಗಬ್ರಹ್ಮ,ನಾಗಕನ್ನಿಕೆ, ನಾಗರಾಜ,ಒಂಟಿ ನಾಗರ ದೇವರುಗಳ ಪ್ರತಿಷ್ಠೆಯು ಅರ್ಚಕ ರಘುರಾಮ ಆಮ್ಮಣ್ಣಾಯ ರವರ ನೇತೃತ್ವದಲ್ಲಿ ಮೇ.24ರಂದು ಜರುಗಿತು.

ಮೇ.20 ರಂದು ಆರಂಭಗೊಂಡು ಸರ್ಪಸಂಸ್ಕಾರ , ಆಶ್ಲೇಷ ಬಲಿ, ಗಣಹೋಮ ಮೊದಲಾದ ವೈಧಿಕ ಕಾರ್ಯಕ್ರಮಗಳು ಜರುಗಿತು.ಕುಟುಂಬಸ್ಥರು, ನೆಂಟರಿಷ್ಟರು, ಊರವರು ಉಪಸ್ಥಿತರಿದ್ದರು.