ಅಗಲಿದ ಯುವ ನಾಯಕ ನವೀನ್ ರೈ ಮೇನಾಲರಿಗೆ ಸಾರ್ವಜನಿಕ ಶ್ರದ್ಧಾಂಜಲಿ-ನುಡಿ ನಮನ

0

ಭಾರತೀಯ ಜನತಾ ಪಾರ್ಟಿಯ ಯುವ ನಾಯಕ ನವೀನ್ ಕುಮಾರ್ ರೈ ಮೇನಾಲ ರವರು ಮೇ.18 ರಂದು ನಿಧನರಾಗಿದ್ದು ಅವರ ಉತ್ತರ ಕ್ರಿಯಾಧಿ ಸದ್ಗತಿ ಕಾರ್ಯಕ್ರಮ ಹಾಗೂ ಸಾರ್ವಜನಿಕ ಶ್ರದ್ಧಾಂಜಲಿ ನುಡಿ ನಮನ ಕಾರ್ಯಕ್ರಮವು ಸುಳ್ಯ ಕೇರ್ಪಳ ಬಂಟರ ಭವನದಲ್ಲಿ ಮೇ.28 ರಂದು ನಡೆಯಿತು.
ಆರಂಭದಲ್ಲಿ ಸ್ಥಳೀಯ ಭಜಕರಿಂದ ಭಜನಾ ಕಾರ್ಯಕ್ರಮ ನಡೆಯಿತು.


ಬಳಿಕ ನಡೆದ ನುಡಿ ನಮನ ಕಾರ್ಯಕ್ರಮ ದಲ್ಲಿ ಮಾಜಿ ಸಚಿವ ಎಸ್.ಅಂಗಾರ, ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ, ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಪ್ರಮುಖ್ ಚಂದ್ರಶೇಖರ ತಳೂರ್, ನ್ಯಾಯವಾದಿ ಜಯಪ್ರಕಾಶ್ ರೈ ಸುಳ್ಯ, ವಿಶ್ರಾಂತ ಪ್ರಾಂಶುಪಾಲರಾದ ಡಾ.ಪ್ರಭಾಕರ ಶಿಶಿಲ, ಡಾ. ಯಶೋಧ ರಾಮಚಂದ್ರ, ‌ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಂಧುಗಳಾದ ವಿಶ್ವನಾಥ ರೈ ಯವರು ನವೀನ್ ರವರ ಬಗ್ಗೆ ಗುಣಗಾನ ಮಾಡಿ ನುಡಿನಮನ ಸಲ್ಲಿಸಿದರು. ಹಿರಿಯರಾದ ನವೀನ್ ರವರ ಮಾವ ಬಾಲಕೃಷ್ಣ ಆಳ್ವ ರವರು ಕಲ್ಕಿ ಭಗವಾನ್ ರವರ ಶಾಂತಿ ಮಂತ್ರ ಬೋಧಿಸಿದರು.


ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.
ನವೀನ್ ರವರ ಪತ್ನಿ ಹಾಗೂ ಮಕ್ಕಳು, ಸಹೋದರ, ಸಹೋದರಿಯರು,ಕುಟುಂಬಸ್ಥರು ಹಾಗೂ ಅಪಾರ ಬಂಧು -ಮಿತ್ರರು, ವಿವಿಧ ಪಕ್ಷದ ನಾಯಕರುಗಳು ಮತ್ತು ಕಾರ್ಯಕರ್ತರು‌ ಸಹಸ್ರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಆಗಮಿಸಿದ ಎಲ್ಲಾ ಬಂಧು ಮಿತ್ರರು ಮೃತರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಕೋರಿದರು.