ಪೆರುವಾಜೆ ಡಾ.ಕೆ ಶಿವರಾಮ ಕಾರಂತ ಸರಕಾರಿ ಪ್ರಥಮದರ್ಜೆಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

0

ಪೆರುವಾಜೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ೨೦೨೨-೨೦೨೩ನೇ ಶೈಕ್ಷಣಿಕ ವರ್ಷದ ವಾರ್ಷಿಕಕ್ರೀಡಾಕೂಟವು ಕಾಲೇಜು ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.


ಶಾಸಕಿ ಕು.ಭಾಗೀರಥಿ ಮುರುಳ್ಯ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ, ದೀಪ ಪ್ರಜ್ವಜನೆ ಮಾಡಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಪದ್ಮನಾಭ ಶೆಟ್ಟಿ ಮಾತನಾಡಿ, ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡಾ ಚಟುವಟಿಕೆಗಳು ಯುವ ಸಮೂಹ ಕ್ರಿಯಾಶೀಲ ವ್ಯಕ್ತಿತ್ವವನ್ನು ಪಡೆಯಲು ಸಾಧ್ಯ ಎಂದರು. ಸಭಾಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ದಾಮೋದರ ಕಣಜಾಲು ಅವರು ವ್ಯಕ್ತಿಯೊಬ್ಬ ತನ್ನ ಬದುಕಿನಲ್ಲಿ ಜೀವನೋತ್ಸಾಹವನ್ನು ಹೊಂದಲು ಕ್ರೀಡೆ ಸಹಕಾರಿ ಎಂದರು.


ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ|ರಾಮಚಂದ್ರ ಕೆ., ಐಕ್ಯುಎಸಿ ಸಹ ಸಂಚಾಲಕರಾದ ಮಂಜುನಾಥ ಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಕಾಂತರಾಜು ಸಿ., ಸಾಂಸ್ಕೃತಿಕ ಸಂಘದ ಸಂಚಾಲಕರಾದ ಯತೀಶ್‌ಕುಮಾರ್ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಯರಾದ ನೀಶ್ಮಾ ಕೆ.ವಿ. ಸ್ವಾಗತಿಸಿ, ಮಾನಸ ವಿ.ಜಿ. ವಂದಿಸಿದರು. ದೀಕ್ಷಿತಾ ಬಿ.ಎಲ್. ಕಾರ್ಯಕ್ರಮ ನಿರೂಪಿಸದರು.