ಸೋಣಂಗೇರಿ: ರಸ್ತೆ ಅಗಲೀಕರಣ ಕಾಮಗಾರಿ ವೀಕ್ಷಿಸಿದ ಶಾಸಕಿ ಭಾಗೀರಥಿ ಮುರುಳ್ಯ

0

ಶೀಘ್ರವಾಗಿ ಬಸ್ಸು ತಂಗುದಾಣ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಸೂಚನೆ

ಶಾಸಕಿ ಭಾಗೀರಥಿ ಮುರುಳ್ಯ ಅವರು ಕಾಮಗಾರಿ ಪ್ರಗತಿಯಲ್ಲಿರುವ ಸೋಣಂಗೇರಿ ಬೇಂಗಮಲೆ ರಸ್ತೆ ಅಗಲೀಕರಣವನ್ನು ವೀಕ್ಷಿಸಿ, ರಸ್ತೆ ಅಭಿವೃದ್ಧಿ ಕಾರ್ಯದ ಮಾಹಿತಿಯನ್ನು ಇಲಾಖೆಯ ಅಧಿಕಾರಿಗಳಿಂದ ಪಡೆದುಕೊಂಡರು.

ಈ ಸಂದರ್ಭದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯದ ಸಂದರ್ಭದಲ್ಲಿ ತೆರವುಗೊಂಡ ಸೋಣಂಗೇರಿ ಪ್ರಯಾಣಿಕರ ಬಸ್ಸು ತಂಗುದಾಣವನ್ನು ಪುನರ್ ನಿರ್ಮಿಸಲು ಸ್ಥಳವನ್ನು ವೀಕ್ಷಿಸಿದರಲ್ಲದೇ, ಆದಷ್ಟು ಶೀಘ್ರವಾಗಿ ಸಾರ್ವಜನಿಕರಿಗೆ ಬಸ್ಸು ತಂಗುದಾಣ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಜಿ‌.ಪಂ. ಮಾಜಿ ಸದಸ್ಯ ಎಸ್.ಎನ್. ಮನ್ಮಥ, ಪಕ್ಷದ ಪ್ರಮುಖರಾದ ಎ.ವಿ. ತೀರ್ಥರಾಮ, ಸಂತೋಷ್ ಜಾಕೆ, ಮಹೇಶ್ ಕುಮಾರ್ ಮೇನಾಲ, ಭಾಸ್ಕರ ಗೌಡ ಹೊಸಗದ್ದೆ ಸೇರಿದಂತೆ ಸ್ಥಳೀಯ ಜನಪ್ರತಿನಿದಿಗಳು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.