ಪಡ್ಪಿನಂಗಡಿ: ಸಾವಯವ ಕೃಷಿ ಸಂವಾದ ಕಾರ್ಯಕ್ರಮ

0


ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ,ಓಕ್ಸ್ಕೋ ಮತ್ತು ಎನ್ .ಸಿ.ಡಿ.ಎಫ್ ರವರ ಸಹಕಾರದೊಂದಿಗೆ ಸಾವಯವ ಕೃಷಿ ಮಾಹಿತಿ ಕಾರ್ಯಕ್ರಮ ಜೂ.15 ರಂದು ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಡ್ಪಿನಂಗಡಿ ಶಾಖೆಯಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಓಕ್ಸ್ಕೋ ಸಹಕಾರಿ ಅಧ್ಯಕ್ಷ ಅಮರ್. ಆರ್ ದೀಪ ಬೆಳಗಿಸಿ ಉದ್ಘಾಟಿಸಿದರು.


ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉದಯ ಕುಮಾರ್ ಬೆಟ್ಟ ಸಭಾಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಲಕ್ಷ್ಮೀನಾರಾಯಣ ನಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಜೆ, ನಿವೃತ್ತ ಶಿಕ್ಷಕ ವಾಸುದೇವ ನಡ್ಕ, ಸಂಪನ್ಮೂಲ ವ್ಯಕ್ತಿಯಾಗಿ ಓಕ್ಸ್ಕೋ ಮುಖ್ಯ ತಾಂತ್ರಿಕ ಅಧಿಕಾರಿ ಬಿ.ವಿ.ಚಂದ್ರಶೇಖರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಲಕ್ಷ್ಮೀನಾರಾಯಣ ನಡ್ಕ ಸ್ವಾಗತಿಸಿದರು.ಪುನಿತ್ ಮೂಲೆಮನೆ ನಿರೂಪಿಸಿದರು. ಪ್ರಶಾಂತ್ ಜೆ ವಂದಿಸಿದರು.