ಸುಳ್ಯ : ಬೂಡು ಭಗವತಿ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆ

0

ಶಾಸಕಿ ಭಾಗೀರಥಿ ಮುರುಳ್ಯರವರಿಗೆ ಗೌರವಾರ್ಪಣೆ

ಸುಳ್ಯ ಕೇರ್ಪಳ ಬೂಡು ಭಗವತಿ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆಯು ಜೂ.15 ರಂದು ನಡೆಯಿತು.
ಮದ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ ನಡೆಯಿತು.


ನೂತನ ಶಾಸಕಿ ಭಾಗೀರಥಿ ಮುರುಳ್ಯರವರನ್ನು ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ‌.ಹರಪ್ರಸಾದ್ ತುದಿಯಡ್ಕ ಮತ್ತು ಶ್ರೀಮತಿ ಶಶಿಕಲಾ ಹರಪ್ರಸಾದ್ ರವರು ಶಾಲು ಹೊದಿಸಿ,ಫಲ,ಪುಷ್ಪ ಸ್ಮರಣಿಕೆ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಭೋದ್ ಶೆಟ್ಟಿ ಮೇನಾಲ, ಬೂಡು ರಾಧಾಕೃಷ್ಣ ರೈ,ಕೃಪಾಶಂಕರ ತುದಿಯಡ್ಕ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.