ಬೆಳ್ಳಾರೆ : ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

0

ವಿಧಾನ ಸಭಾ ಚುನಾವಣೆಯಲ್ಲಿ ಅತ್ಯಧಿಕ ಮತಗಳ ಅಂತರದಿಂದ ಭಾಗೀರಥಿ ಮುರುಳ್ಯ ಶಾಸಕರಾಗಲು ಕಾರಣಕರ್ತರಾದ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವು ಜೂ.16 ರಂದು ಬೆಳ್ಳಾರೆ ದೇವಿ ಹೈಟ್ಸ್ ಸಭಾಂಗಣದಲ್ಲಿ ನಡೆಯಿತು.


ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮಾತನಾಡಿ ವಿಧಾನ ಸಭಾ ಕ್ಷೇತ್ರದಲ್ಲಿ ಆದ ಅಭಿವೃದ್ಧಿ ಕೆಲಸಗಳಿಂದ ಮತ್ತು ಕಾರ್ಯಕರ್ತರ ಶ್ರಮದಿಂದ ಅತ್ಯಧಿಕ ಮತಗಳಿಂದ ಗೆಲ್ಲಲು ಸಾಧ್ಯವಾಯಿತು.ಬೂತ್ ಮಟ್ಟದಲ್ಲಿ ಸದಾ ಚಟುವಟಿಕೆಗಳಿಂದ ಇರಬೇಕು.ಜನರ ಸೇವೆ ನಿರಂತರ ಮಾಡಬೇಕು.ಜನಸಾಮಾನ್ಯರಿಗೆ ಸಹಕಾರ ನೀಡುತ್ತಾ ಬರಬೇಕು.ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಹೇಳಿದರು.ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.


ಶಾಸಕಿ ಭಾಗೀರಥಿ ಮುರುಳ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೋನಪ್ಪ ತಂಬಿನಮಕ್ಕಿ ಸ್ವಾಗತಿಸಿದರು.


ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ,ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಕೇರ್ಪಡ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯ.ಸ.ಅಧ್ಯಕ್ಷ ವಸಂತ ನಡುಬೈಲು, ನವೀನ ರೈ ತಂಬಿನಮಕ್ಕಿ, ಗ್ರಾ.ಪಂ.ಸದಸ್ಯ ದಿನೇಶ್ ತಡಗಜೆ,ಪದ್ಮನಾಭ ಬೀಡು, ಪ್ರಸಾದ್ ಸುಪ್ರಭ, ಲೋಕೇಶ್, ಮುರಳಿ ತಡಗಜೆ, ಶ್ರೀಮತಿ ಗೀತಾ ಪ್ರೇಮ್,ಸವಿತ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.