ಸುಳ್ಯ ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ವನಮಹೋತ್ಸವ

0


ಸುಳ್ಯ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕ ಮತ್ತು ಹಿರಿಯ ವಿದ್ಯಾರ್ಥಿಗಳ ಬಳಗ -ಜಾಗೃತಿ ಇದರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಜೂ . 17 ರಂದು ಕಾಲೇಜ್ ಆವರಣದಲ್ಲಿ ಆಚರಿಸಲಾಯಿತು. ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕರಾದ ಗಿರಿಜಾಶಂಕರ ತುದಿಯಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸುಳ್ಯ ಉಪ ವಲಯ ಅರಣ್ಯಾಧಿಕಾರಿ ವಿ. ಹೆಚ್. ಕರಣಿಮಠ್ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ವನಮಹೋತ್ಸವದ ಮಹತ್ವದ ಬಗ್ಗೆ ತಿಳಿಸಿದರು.


ಈ ಸಂದರ್ಭದಲ್ಲಿ ’ಜಾಗೃತಿ’ ಬಳಗದ ಲಾಂಛನವನ್ನು ಬಿಡುಗಡೆ ಗೊಳಿಸಲಾಯಿತು.


ಸಂಸ್ಥೆಯ ಪ್ರಾಂಶುಪಾಲೆ ಶೋಭಾ ಬೊಮ್ಮೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಸ್ಥೆಯ ಹಿರಿಯ ವಿದ್ಯಾರ್ಥಿ ಶ್ರವಣ್ ಶೇಡಿಕಜೆ ’ಜಾಗೃತಿ’ ಬಳಗದ ಧ್ಯೇಯೋದ್ದೇಶಗಳ ಬಗ್ಗೆ ವಿವರ ನೀಡಿದರು.

ವೇದಿಕೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕದ ಕೌನ್ಸಿಲರ್ ಹಾಗೂ ಗಣಕಶಾಸ್ತ್ರ ಉಪನ್ಯಾಸಕ ಹರ್ಷಿತ್ ಜಿ ಜೆ , ಪ್ರೌಢಶಾಲಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಶೇಡಿಕಜೆ ,ಜೂನಿಯರ್ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿ ಪ್ರತಿನಿಧಿಗಳಾದ ಅಶ್ವಿನಿ ಎಸ್ ಮತ್ತು ನಿಹಾರ್ ಕೆ ಬಿ ಹಾಗು ’ಜಾಗೃತಿ’ ಬಳಗದ ಸದಸ್ಯರುಗಳಾದ ಕೌಶಿಕ್ ರೈ ಮತ್ತು ಶ್ರವಣ್ ಶೇಡಿಕಜೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕು. ಸುಶ್ಮ, ಕು. ಸಿಂಚನ, ಕು.ರಮ್ಯಪಾರ್ವತಿ ಪ್ರಾರ್ಥಿಸಿದರು. ಕು.ನಿಖಿತ ಮತ್ತು ಕು.ದೃತಿಕಾ ನಿರೂಪಿಸಿ, ಹಿರಿಯ ವಿದ್ಯಾರ್ಥಿ ಕೌಶಿಕ್ ರೈ ವಂದಿಸಿದರು.