ಜೂ.25 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ಜಲದುರ್ಗಾದೇವಿಗೆ ರಥ ಸಮರ್ಪಣೆ ಪ್ರಯುಕ್ತ ಸಮಾಲೋಚನಾ ಸಭೆ

0

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ದೇವಿಗೆ ರಥ ಸಮರ್ಪಣೆ ಪ್ರಯುಕ್ತ ಸಮಾಲೋಚನಾ ಸಭೆಯು ಜೂ.25 ರಂದು ಸಂಜೆ 4.00 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ.


ಶ್ರೀಧಾಮ ಮಾಣಿಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳು ಹಾಗೂ ಶಿಲ್ಪಿಗಳಾದ ಮಹೇಶ ಮುನಿಯಂಗಳರವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.


ಇದೇ ಬರುವ ನವಂಬರ್ ತಿಂಗಳಲ್ಲಿ ಶ್ರೀ ದೇವಿಗೆ ರಥ ಸಮರ್ಪಿಸಬೇಕೆಂದು ಸಂಕಲ್ಪಿಸಿದಂತೆ ರಥ ನಿರ್ಮಾಣ ಹಾಗೂ ಸಮರ್ಪಣೆಯ ಬಗ್ಗೆ ಪೂರ್ವಭಾವಿ ತಯಾರಿಯ ಕುರಿತು ನಡೆಯುವ ಈ ಸಭೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ,ಸಹಕಾರಗಳನ್ನು ನೀಡಿ ಶ್ರೀ ದೇವರ ಮಹತ್ಕಾರ್ಯವನ್ನು ವಿಧಿವತ್ತಾಗಿ ಜರುಗಿಸಲು ಶಕ್ತಿತುಂಬಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.