ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ವತಿಯಿಂದ ಶಾಸಕಿ ಭಾಗೀರಥಿ ಅವರಿಗೆ ಸನ್ಮಾನ

0

ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದ ವತಿಯಿಂದ ನೂತನ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರನ್ನು ಜೂ.17ರಂದು ಸಂಜೆ ಸನ್ಮಾನಿಸಿ, ಗೌರವಿಸಲಾಯಿತು.

ಕನಕಮಜಲಿಗೆ ಸಂಜೆ ಆಗಮಿಸಿದ ಶಾಸಕರನ್ನು ಭಜನಾ ಮಂದಿರದ ಅಧ್ಯಕ್ಷ ವಸಂತ ಮಳಿ, ಪ್ರಧಾನ ಕಾರ್ಯದರ್ಶಿ ಈಶ್ವರ ಕೊರ್ಬಂಡ್ಕ ಅವರು ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ನಾರಾಯಣ ಗೌಡ ಬೊಮ್ಮೆಟ್ಟಿ, ಕನಕಮಜಲು ಪ್ರಾ.ಕೃ‌.ಪ.ಸ.ಸಂಘದ ಮಾಜಿ ಅಧ್ಯಕ್ಷರುಗಳಾದ ವಸಂತ ಗಬ್ಬಲಡ್ಕ, ಹರೀಶ್ ಮೂರ್ಜೆ, ಭಜನಾ ಮಂದಿರದ ಮಾಜಿ ಅಧ್ಯಕ್ಷ ಜಗನ್ನಾಥ ಕಾಪಿಲ, ಅಜ್ಜಾವರ ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಜಯರಾಜ್ ಕುಕ್ಕೇಟಿ, ಪ್ರಧಾನ ಕಾರ್ಯದರ್ಶಿ ಹೇಮಂತ್ ಮಠ, ಚಂದ್ರಶೇಖರ ನೆಡಿಲು, ಬಾಲಚಂದ್ರ ಮಾಣಿಮಜಲು, ಜಗನ್ನಾಥ ಮಾಣಿಮಜಲು, ಕನಕಮಜಲು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ, ಸದಸ್ಯೆ ಶ್ರೀಮತಿ ಶಾರದಾ ಉಗ್ಗಮೂಲೆ ಸೇರಿದಂತೆ ಭಜನಾ ಮಂದಿರದ ಪದಾಧಿಕಾರಿಗಳು ಉಪಸ್ಥಿತರಿದ್ದರು.