ಕಾಂಗ್ರೆಸ್ ನಾಯಕರ ಮೇಲೆ ಪರಾಜಿತ ಅಭ್ಯರ್ಥಿ ಕೃಷ್ಣಪ್ಪ ನೀಡಿರುವ ದೂರನ್ನು ಕೂಡಲೇ ಹಿಂಪಡೆಯಬೇಕು: ಶಶಿಧರ್ ಕೊಯಿಕುಳಿ

0

ಸುಳ್ಯ ವಿಧಾನಸಭಾ ಕ್ಷೇತ್ರದ ಮಾನ ಹರಾಜು ಹಾಕುತ್ತಿರುವ ಪರಾಜಿತ ಅಭ್ಯರ್ಥಿ ಕೃಷ್ಣಪ್ಪರು ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ. ಒಳ್ಳೆಯ ಅಭ್ಯರ್ಥಿಗೆ ಟಿಕೆಟ್ ನೀಡಿದ್ದರೆ ಈ ಗೊಂದಲವಾಗುತ್ತಿರಲಿಲ್ಲ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಮೇಲೆ ದೂರು ನೀಡುವುದರ ಮುಖಾಂತರ ಅವರ ನಿಜ ಬಣ್ಣ ಬಯಲಾಗಿದೆ. ಸುಳ್ಯದಲ್ಲಿ ಕಾಂಗ್ರೆಸ್ ನಿರ್ನಾಮ ಮಾಡುವ ಪಣ ತೊಟ್ಟಿರಬೇಕು. ಇದರ ಪರಿಣಾಮವನ್ನು ಕೃಷ್ಣಪ್ಪ ಎದುರಿಸುತ್ತಾರೆ. ಪ್ರಾಮಾಣಿಕ ನಿಷ್ಠಾವಂತ ಕಾರ್ಯಕರ್ತರನ್ನು, ನಾಯಕರನ್ನು ಮುಟ್ಟಿದರೆ ಎಚ್ಚರಿಕೆ.


ತಕ್ಷಣ ದೂರನ್ನು ಹಿಂದೆ ತೆಗೆದುಕೊಳ್ಳಬೇಕು. ಇಷ್ಟೆಲ್ಲಾ ಬೆಳವಣಿಗೆ ನಡೆಯುತ್ತಿದ್ದರೂ ಕಾರ್ಯಕರ್ತರು ಭಾವನೆಗಳಿಗೆ ಸ್ಪಂದಿಸದ ಬ್ಲಾಕ್ ಕಾಂಗ್ರೆಸ್ ಸಮಿತಿಯನ್ನು ವಿಸರ್ಜಿಸುವುದು ಮಾತ್ರವಲ್ಲದೆ ಬ್ಲಾಕ್ ಅಧ್ಯಕ್ಷರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ. ಎಂದು ಸುಳ್ಯ ನಗರ ಕಾಂಗ್ರೆಸ್ ಮುಖಂಡ ಶಶಿಧರ್ ಎಂ ಜೆ ಪತ್ರಿಕಾ ಹೇಳಿಕೆ ನೀಡಿದ್ದಾರೆ.