ಕನಕಮಜಲು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಶಾಸಕಿ ಭಾಗೀರಥಿ ಅವರಿಗೆ ಸನ್ಮಾನ

0

ಬಿಜೆಪಿ ಶಕ್ತಿಕೇಂದ್ರದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಕೆ

ಕನಕಮಜಲು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ನೂತನ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರಿಗೆ ಸನ್ಮಾನ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಕೆ ಕಾರ್ಯಕ್ರಮವು ಜೂ.17ರಂದು ಸಂಜೆ ಕನಕಮಜಲಿನ ಶ್ರೀ ಆತ್ಮಾರಾಮ ಸಭಾಭವನದಲ್ಲಿ ಜರುಗಿತು.


ಕನಕಮಜಲು ಬಿಜೆಪಿ ಶಕ್ತಿಕೇಂದ್ರದ ಸಂಚಾಲಕ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಧರ ಕುತ್ಯಾಳ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಕ್ತಿಕೇಂದ್ರದ ಕಾರ್ಯಕರ್ತರ ಪರವಾಗಿ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ, ಅಜ್ಜಾವರ ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಜಯರಾಜ್ ಕುಕ್ಕೇಟಿ, ಪ್ರಧಾನ ಕಾರ್ಯದರ್ಶಿ ಹೇಮಂತ್ ಮಠ, ಕನಕಮಜಲು ಶಕ್ತಿಕೇಂದ್ರದ ಸಹಸಂಚಾಲಕ ಈಶ್ವರ ಕೊರ್ಬಂಡ್ಕ, ಬಿಜೆಪಿ ವಾರ್ಡ್ ಸಮಿತಿ ಅಧ್ಯಕ್ಷ ಜಗನ್ನಾಥ ಮಾಣಿಮಜಲು, ಕನಕಮಜಲು ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಗೌಡ ಬೊಮ್ಮೆಟ್ಟಿ, ಸಹಕಾರಿ ಸಂಘದ ಮಾಜಿ ಅಧ್ಯಕ್ಷರುಗಳಾದ ವಸಂತ ಗಬ್ಬಲಡ್ಕ, ಹರೀಶ್ ಮೂರ್ಜೆ, ಗ್ರಾ.ಪಂ. ಮಾಜಿ ಸದಸ್ಯ ದಿವಾಕರ ಕಾಳಪ್ಪಜ್ಜನಮನೆ, ಕನಕಮಜಲು ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ರಾಮ್ ಪ್ರಸಾದ್ ಭಟ್ ಕೋರೆಕ್ಕಾನ, ಗ್ರಾ.ಪಂ. ಸದಸ್ಯೆ ಶ್ರೀಮತಿ ಶಾರದಾ ಉಗ್ಗಮೂಲೆ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಚಂದ್ರಶೇಖರ ನೆಡಿಲು,ಚಂದ್ರಶೇಖರ ಕನಕಮಜಲು, ಬಾಲಚಂದ್ರ ಮಾಣಿಮಜಲು ಸೇರಿದಂತೆ ಹಲವಾರು ಮಂದಿ ಶಕ್ತಿಕೇಂದ್ರದ ಕಾರ್ಯಕರ್ತರು ಉಪಸ್ಥಿತರಿದ್ದರು.