ಪಂಜದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ದರ ಕಡಿತ ಮಾರಾಟ

0


ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ದರ ಕಡಿತ ಮಾರಾಟ ಪಂಜ ಶ್ರೀ ಶಾರಾದಾಂಭ ಭಜನಾ ಮಂದಿರದಲ್ಲಿ ನಡೆಯುತ್ತಿದ್ದು, ಭಜನಾ ಮಂದಿರದ ಕಾರ್ಯದರ್ಶಿ ಗುರುಪ್ರಸಾದ್ ತೋಟ ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ಪಂಜ ವಲಯದ ಅಧ್ಯಕ್ಷರಾದ ಶಿವಪ್ರಸಾದ್ ಮಾದನಮನೆ ವಹಿಸಿದ್ದರು.

ವೇದಿಕೆಯಲ್ಲಿ ಅತಿಥಿಗಳಾಗಿ ಜನಜಾಗೃತಿ ಸದಸ್ಯರಾದ ಮೋನಪ್ಪ ಬೊಳ್ಳಾಜೆ, ಸಿರಿ ಸಂಸ್ಥೆಯ ಸಿಬ್ಬಂದಿ ಜಗದೀಶ್, ಐವತೋಕ್ಲು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಧನ್ಯ, ವಲಯದ ಮೇಲ್ವಿಚಾರಕರು ಶ್ರೀಮತಿ ಕಲಾವತಿ ವಹಿಸಿದ್ದರು, ವಲಯದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

ಶ್ರೀಮತಿ ವಿಮಲಾ ಪ್ರಾರ್ಥಿಸಿ ಸೇವಾಪ್ರತಿನಿಧಿ ಶ್ರೀಮತಿ ತಾರಾ ಟಿ ಸ್ವಾಗತಿಸಿ ಸೇವಾಪ್ರತಿನಿಧಿ ಶ್ರೀಮತಿ ರೋಹಿಣಿ ಆರ್ನೋಜಿ ವಂದಿಸಿದರು.