ಬೆಳ್ಳಾರೆ ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

0

ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಬೆಳ್ಳಾರೆ ಇದರ ೨೦೨೨-೨೩ನೇ ಸಾಲಿನ ವಾರ್ಷಿಕ ಮಹಾಸಭೆಯು ಜೂನ್ ೨೨ರಂದು ಸ್ನೇಹಿತರ ಕಲಾ ಸಂಘದ ಸಭಾಂಗಣ “ಸ್ನೇಹ ಸದನ” ಬೆಳ್ಳಾರೆಯಲ್ಲಿ ಗೌರವಾಧ್ಯಕ್ಷರಾದ ಆನಂದ ರೈ ಪುಡ್ಕಜೆ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ವಾರ್ಷಿಕ ವರದಿಯನ್ನು ಸಂಘದ ಕಾರ್ಯದರ್ಶಿ ಸಂಜಯ್ ನೆಟ್ಟಾರು ಸಭೆಯಲ್ಲಿ ಮಂಡಿಸಿದರು. ಸಭೆಯ ವರದಿಯ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಈ ವರದಿಯನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ನಂತರ ವಾರ್ಷಿಕ ಜಮಾ ಖರ್ಚು ಲೆಕ್ಕಪತ್ರವನ್ನು ಸಂಘದ ಕೋಶಾಧಿಕಾರಿ ವಸಂತ ಗೌಡ ಪಡ್ಪು ಸಭೆಗ್ಲೆ ಮಂಡಿಸಿದರು. ಸಭೆಯಲ್ಲಿ ಈ ಲೆಕ್ಕಪತ್ರವನ್ನು ಧ್ವನಿಮತದಿಂದ ಅಂಗೀಕರಿಸಲಾಯಿತು. ನಂತರ ವರ್ಷದ ಕಾರ್ಯಕ್ರಮಗಳ ಅವಲೋಕನ ನಡೆಸಲಾಯಿತು. ನಂತರ ಮುಂದಿನ ವರ್ಷದ ಕಾರ್ಯಕ್ರಮವನ್ನು ಯೋಜಿಸಿ ಅನುಮೋದನೆ ನೀಡಲಾಯಿತು.. ನಂತರ ೨೦೨೩-೨೪ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಚೀಮುಳ್ಳು , ಕಾರ್ಯದರ್ಶಿಯಾಗಿ ಆನಂದ ಉಮಿಕ್ಕಳ ಕೋಶಾಧಿಕಾರಿಯಾಗಿ ಆನಂದ ಗೌಡ ಪಡ್ಪು ಉಪಾಧ್ಯಕ್ಷರಾಗಿ ಚಂದ್ರಶೇಖರ ಪನ್ನೆ ಜತೆ ಕಾರ್ಯದರ್ಶಿಯಾಗಿ ಶಶಿಧರ ಮಣಿಯಾಣಿ ಬೀಡು, ನಿಕಟ ಪೂರ್ವಾಧ್ಯಕ್ಷರಾಗಿ ಶೇಷಪ್ಪ ಕುಲಾಲ್ ಬಸ್ತಿಗುಡ್ಡೆ ಇವರನ್ನು ಆಯ್ಕೆ ಮಾಡಲಾಯಿತು.


ಚಂದ್ರಹಾಸ ಮಣಿಯಾಣಿ ಪಡ್ಪು , ಉಮೇಶ್ ಕಜೆ, ಮಹಾಲಿಂಗ ಪಾಟಾಳಿ ಕುರುಂಬುಡೇಲು, ಪದ್ಮನಾಭ ಚೂಂತಾರು, ವಸಂತ ಉಲ್ಲಾಸ್, ಜನಾರ್ಧನ ಪೂಜಾರಿ ಚೀಮುಳ್ಳು ಇವರುಗಳನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ನಿಕಟ ಪೂರ್ವಾಧ್ಯಕ್ಷ್ರ ಆನಂದ ಗೌಡ ಪಡ್ಪು ಇವರು ಕಾರ್ಯನಿರ್ವಹಿಸಿದರು. ಆನಂದ ಗೌಡ ಪಡ್ಪು ಸ್ವಾಗತಿಸಿ, ಚಂದ್ರಶೇಖರ ಪನ್ನೆ ವಂದಿಸಿದರು.