ಸುಳ್ಯ: ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ ಕಾರ್ಯಕ್ರಮ

0

ಸುಳ್ಯ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ ಕಾರ್ಯಕ್ರಮ ಜೂ. 24ರಂದು ಅಮರಶ್ರೀಭಾಗ್ ನ ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು. ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾಪ್ರಸಾದ್ ಕೆ.ವಿ ಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿ.ಟಿ.ಯು. ರಿಜಿಸ್ಟ್ರಾರ್ ಡಾ. ಬಿ.ಯು. ರಂಗಸ್ವಾಮಿ ಭಾಗವಹಿಸಿದ್ದರು.

ವಿಟಿಯು ವೈಸ್ ಚಾನ್ಸಲರ್ ಡಾ. ಎಸ್. ವಿದ್ಯಾಶಂಕರ್ ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಡಾ. ಜ್ಯೋತಿ ಆರ್. ಪ್ರಸಾದ್, ವಿಟಿಯು ಎಕ್ಸಿಕ್ಯುಟಿವ್ ಮೆಂಬರ್, ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ, ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ವಿ, ವಿ.ಟಿ.ಯು. ಮಂಗಳೂರು ವಿಭಾಗೀಯ ಅಧಿಕಾರಿ ಡಾ. ಶಿವಕುಮಾರ್ ಹೆಚ್.ಆರ್, ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ, ಡೀನ್ ಅಕಾಡೆಮಿಕ್ ಡಾ. ಉಮಾಶಂಕರ್ ಕೆ.ಎಸ್, ಕಾಲೇಜಿನ ಉಪಪ್ರಾಂಶುಪಾಲ, ಪದವಿಪ್ರದಾನ ಕಾರ್ಯಕ್ರಮದ ಮುಖ್ಯ ಸಂಯೋಜಕ ಡಾ. ಶ್ರೀಧರ್, ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸಲಹಾ ಸಮಿತಿ ಸದಸ್ಯರಾದ ನಿತ್ಯಾನಂದ ಮುಂಡೋಡಿ, ಸಂತೋಷ್ ಜಾಕೆ, ಕಾಲೇಜಿನ ಡೀನ್ ಎಡ್ಮಿಷನ್ ಪ್ರೊ. ಬಾಲಪ್ರದೀಪ್, ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ವಿಭಾಗ ಮುಖ್ಯಸ್ಥರಾದ ಡಾ. ಕುಸುಮಾಧರ ಎಸ್, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಶೇಖರ್ ಕೆ.ಎಸ್, ಎಂಬಿಎ ವಿಭಾಗ ಮುಖ್ಯಸ್ಥರಾದ ಪ್ರೊ. ಕೃಷ್ಣಾನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ. ಉಜ್ವಲ್ ಯು.ಜೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು.

ಡಾ. ಶ್ರೀಧರ್ ಕೆ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಪ್ರೊ. ಕೃಷ್ಣರಾಜ್ ಕೆ, ಅನನ್ಯ ಹೆಬ್ಬಾರ್, ನನ್ಮಕೃಷ್ಣ ಇ, ವಿದ್ಯಾಶ್ರೀ ಎಲ್. ಆಚಾರ್, ಸೃಷ್ಟಿ ಎಸ್ ಪ್ರಾರ್ಥಸಿದರು. ಮುಖ್ಯ ಅತಿಥಿ ಡಾ. ರಂಗಸ್ವಾಮಿ ಬಿ.ಇ ಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಟ್ರೈನಿಂಗ್ & ಪ್ಲೇಸ್ ಮೆಂಟ್ ಆಫೀಸರ್ ಪ್ರೊ. ಅನಿಲ್ ಬಿ.ವಿ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಡಾ. ಜ್ಯೋತಿ ಆರ್ ಪ್ರಸಾದ್ ಕಾಲೇಜಿನ ಮ್ಯಾಗಜೀನ್ ಬಿಡುಗಡೆ ಮಾಡಿದರು. ಡಾ. ಉಮಾಶಂಕರ್ ಕೆವಿಜಿ ಚಿನ್ನದ ಪದಕಕ್ಕೆ ಭಾಜನರಾದ, ವಿಟಿಯು ರ್ಯಾಂಕ್ ವಿಜೇತರನ್ನು ವೇದಿಕೆಗೆ ಆಹ್ವಾನಿಸಿದರು. ಉಳಿದಂತೆ ಆಯಾ ವಿಭಾಗ ಮುಖ್ಯಸ್ಥರು ಪದವಿ ಸ್ವೀಕರಿಸುತ್ತಿರುವ ವಿದ್ಯಾರ್ಥಿಗಳ ಹೆಸರು ವಾಚಿಸಿದರು.

ಪ್ರೊ. ಅಪೂರ್ವ ಬಿ ಮತ್ತು ಪ್ರೊ. ಭವ್ಯ ಪಿ.ಎಸ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕ ವೃಂದ, ಕಚೇರಿ ಸೂಪರಿಂಟೆಂಡೆಂಟ್ ನಾಗೇಶ್ ಕೊಚ್ಚಿ ಮತ್ತು ಬೋಧಕೇತರ ಸಿಬ್ಬಂದಿಗಳು ಸಹಕಾರ ನೀಡಿದರು.