ದೇವರಕಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

0

ಐವರ್ನಾಡು ಗ್ರಾಮದ ದೇವರಕಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನವು ಜೂ.22 ರಂದು ನಡೆಯಿತು.
ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ನವೀನ್ ಕುಮಾರ್ ಸಾರಕರೆ,ಉಪಾಧ್ಯಕ್ಷೆ ಶ್ರೀಮತಿ ಮಮತಾ ಎಡಮಲೆ ಹಾಗೂ ಸದಸ್ಯರು,ಮಕ್ಕಳ ಪೋಷಕರು ಶ್ರಮದಾನದಲ್ಲಿ ಭಾಗವಹಿಸಿದ್ದರು.
ಶಾಲಾ ಸುತ್ತಮುತ್ತ ಸ್ವಚ್ಛಗೊಳಿಸಲಾಯಿತು.
ಶಿಕ್ಷಕರು ಸಹಕರಿಸಿದರು.
ಮಧ್ಯಾಹ್ನ ಶಾಲಾ ಮಕ್ಕಳಿಗೆ ಮತ್ತು
ಭಾಗವಹಿಸಿದವರಿಗೆ ಊಟ, ಹಾಗೂ ಸಿಹಿತಿಂಡಿ ವ್ಯವಸ್ಥೆಯನ್ನು ಪ್ರಭಾರ ಮುಖ್ಯಶಿಕ್ಷಕಿ ಪ್ರಮೀಳಾ ಮತ್ತು ಸೋಣಂಗೇರಿ ಕ್ಲಸ್ಟರ್ ನ ಸಿ.ಆರ್.ಪಿ ಅನುರಾಧರವರು ನೀಡಿ ಸಹಕರಿಸಿದರು.