ಪೈಚಾರು ಅಲ್ ಅಮೀನ್ ಯೂತ್ ಸೆಂಟರ್ ವತಿಯಿಂದ ಸಸಿ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ

0

ಪೈಚಾರು ಅಲ್ ಅಮೀನ್ ಯೂತ್ ಸೆಂಟರ್ ವತಿಯಿಂದ ಸಸಿ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮ ಜೂ 25 ರಂದು ಪೈಚಾರು ಬದ್ರಿಯ ಜುಮಾ ಮಸೀದಿ ವಠಾರದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಸ್ಥಳೀಯ ಬದ್ರಿಯಾ ಜುಮಾ ಮಸೀದಿ ಖತೀಬರಾದ ಶಮೀರ್ ನಹೀಮಿಯವರು ದುವಾ ನೇರವೆರಿಸಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲ್ ಅಮೀನ್ ಯೂತ್ ಸೆಂಟರ್ ಅಧ್ಯಕ್ಷ ಅಬೂಸಾಲಿ ಕೆಪಿ ವಹಿಸಿದ್ದರು.


ಈ ಸಂದರ್ಭದಲ್ಲಿ ಪೈಚಾರು ಖುವ್ವತ್ತುಲ್ ಇಸ್ಲಾಂ ಮದರಸದ ವಿದ್ಯಾರ್ಥಿಗಳಿಗೆ ಕಳೆದ ಸಾಲಿನಲ್ಲಿ ಮದರಸ ಪಬ್ಲಿಕ್ ಪರೀಕ್ಷೆಯಲ್ಲಿ ಸುಳ್ಯ ರೇಂಜಿಗೆ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಖದಿಜತ್ತುಲ್ ಸಲ್ವಾ,ಹಾಗೂ SSLC ಯಲ್ಲಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಶಮ್ನಾ ಪೈಚಾರ್ ಇವರನ್ನು ಸನ್ಮಾನಿಸಲಾಯಿತು.


ಸಸಿ ವಿತರಣೆಯನ್ನು ಉಪ ವಲಯ ಅರಣ್ಯಧಿಕರಿಗಳಾದ ವೀರಭದ್ರಯ್ಯ ನೆರವೇರಿಸಿದರು.ವೇದಿಕೆಯಲ್ಲಿ ಜಾಲ್ಸೂರು ಗ್ರಾಮ ಪಂಚಾಯತಿ ಸದಸ್ಯರಾದ ಮುಜೀಬ್ ಪೈಚಾರ್, ಸುಳ್ಯದ ಉಪ ವಲಯ ಅರಣ್ಯಧಿಕಾರಿಗಳಾದಯಶೋಧರ,ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಪೈಚಾರ್ ಇದರ ಅಧ್ಯಕ್ಷ ಬಶೀರ್ ಆರ್ ಬಿ.ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಶರೀಫ್ ಟಿಎ,ಪಿಸ್ ಸ್ಕೂಲ್ ಕುಂಬ್ರಚೋಡು ಸ್ಧಾಪಕದ್ಯಕ್ಷ ಹಾಜಿ ಅಬೂಬಕ್ಕರ್ ಬೊಳುಬೈಲು,ಜಾಲ್ಸೂರು ಬೀಟ್ ಪೋಲಿಸ್ ರಮೇಶ್, ಬಿಜೆಎಮ್ ಪ್ರಧಾನ ಕಾರ್ಯದರ್ಶಿ ಹನೀಫ್ ಪಿಕೆ, ಪ್ರಗತಿ ಸೌಂಡ್ಸ್ ಮಾಲಕ ಶಾಫೀ ಪ್ರಗತಿ,ಸೆಬಾಸ್ಟಿಯನ್ ಮಡಪ್ಪಾಡಿ,ಕೃಷಿಕರಾದ ಅಹಮದ್ ಪೈಚಾರ್, ಹಾಗೂ ಅಲ್ ಅಮೀನ್ ಯೂತ್ ಸೆಂಟರ್ ಇದರ ಸರ್ವ ಸದಸ್ಯರುಗಳು ಹಾಗೂ ಸ್ಥಳೀಯರು ಭಾಗವಹಿಸಿದ್ದರು.


ಅಲ್ ಅಮೀನ್ ಯೂತ್ ಸೆಂಟರ್ ಪೈಚಾರ್ ‌ಇದರ ಸದಸ್ಯರಾದ ‌ಅಬ್ದುಲ್ ಸತ್ತಾರ್ ಪಿ ಎ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.