ಕನಕಮಜಲು ಶಾಲೆಯಲ್ಲಿ ಮಕ್ಕಳ ಧ್ವನಿಗೆ ಧ್ವನಿಯಾಗೋಣ ಅಭಿಯಾನ

0

ಪಡಿ ಸಂಸ್ಥೆ ಮಂಗಳೂರು, ಶಿಕ್ಷಣ ಸಂಪನ್ಮೂಲ ಕೇಂದ್ರ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಹಕ್ಕು ಮತ್ತು ಮಕ್ಕಳ ರಕ್ಷಣೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಮಕ್ಕಳ ಧ್ವನಿಗೆ ಧ್ವನಿಯಾಗೋಣ ಅಭಿಯಾನ 2023 ಕಾರ್ಯಕ್ರಮ ಕನಕಮಜಲು ಶ್ರೀ ನರಿಯೂರು ರಾಮಣ್ಣಗೌಡ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಕುತ್ಯಾಲ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್ ಹಮೀದ್ ಸುಣ್ಣಮೂಲೆ, ಸುಳ್ಯ ಶಿಕ್ಷಣ ಸಂಪನ್ಮೂಲ ಕೇಂದ್ರದ ಮುಖಂಡರುಗಳಾದ ರಾಜೇಶ್ವರಿ ಕಾಡುತೋಟ, ನಾರಾಯಣ ಕಿಲಂಗೋಡಿ, ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕು, ಮಕ್ಕಳ ರಕ್ಷಣೆ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ಬಾಲಕಾರ್ಮಿಕತೆ, ಮಕ್ಕಳಲ್ಲಿ ಅತಿಯಾದ ಮೊಬೈಲ್ ಬಳಕೆ ಮುಂತಾದ ವಿಷಯಗಳ ಕುರಿತು ಅರಿವು ನೀಡಲಾಯಿತು.
ಮಕ್ಕಳಲ್ಲಿ ಜಾಗೃತಿ ಕುರಿತು ಸಾಕ್ಷಾ ಚಿತ್ರ ಪ್ರದರ್ಶನ ಈ ಸಂದರ್ಭದಲ್ಲಿ ನಡೆಯಿತು.