ಬೊಳುಬೈಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಮಾಹಿತಿ ಕಾರ್ಯಕ್ರಮ

0

ಜಾಲ್ಸೂರಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ವಲಯದ ವತಿಯಿಂದ ಪರಿಸರ ಮಾಹಿತಿ ಕಾರ್ಯಕ್ರಮವು ಬೊಳುಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಬಾಲ ಸುಬ್ರಹ್ಮಣ್ಯ ಅವರು ದೀಪ ಬೆಳಗಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು.

ನಿವೃತ್ತ ಶಿಕ್ಷಕ ವೀರಪ್ಪ ಮೊಟ್ಟೆಮನೆ ಅವರು ಪರಿಸರದ ಕುರಿತು ಮಾಹಿತಿ ನೀಡಿದರು.
ಕೃಷಿ ಮೇಲ್ವಿಚಾರಕರಾದ ರಮೇಶ್ ಅವರು ಯೋಜನೆಯ ಬಗ್ಗೆ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಬೊಳುಬೈಲು ಸ.ಕಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರಾದಮ್ಮ ಅವರು ಮಕ್ಕಳಿಗೆ ಪರಿಸರ ದ ಬಗ್ಗೆ ಸ್ಪರ್ಧೆ ಏರ್ಪಡಿಸಿ, ವೇದಿಕೆ ಯಲ್ಲಿ ಇದ್ದ ಗಣ್ಯರಿಂದ ಬಹುಮಾನ ವಿತರಣೆ ಮಾಡಿಸಿದರು.


ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಕೋಶಾಧಿಕಾರಿ ಶ್ರೀಮತಿ ವೇದಾ ಶೆಟ್ಟಿ, ನವಚೇತನ ಯುವಕ ಮಂಡಲ ಅಧ್ಯಕ್ಷ ಶಶಿ ಪ್ರಸಾದ್ ಕಾಟೂರು, ಸೇವಾಪ್ರತಿನಿಧಿ ಶ್ರೀಮತಿ ಸಂದ್ಯಾ ಉಪಸ್ಥಿತರಿದ್ದರು.
ಬೊಳುಬೈಲು ಒಕ್ಕೂಟ ಅಧ್ಯಕ್ಷ ಪದ್ಮನಾಭ ನೆಕ್ರಜೆ ಸ್ವಾಗತಿಸಿ ಜಾಲ್ಸುರು ಗೇಟ್ ಸೇವಾಪ್ರತಿನಿಧಿ ಬಾಲಕೃಷ್ಣ ಅಡ್ಕಾರು ವಂದಿಸಿದರು. ವಲಯ ಮೇಲ್ವಿಚಾರಕ ತೀರ್ಥರಾಮ ಅವರು ಕಾರ್ಯಕ್ರಮ ನಿರೂಪಿಸಿದರು.