ಎಡಮಂಗಲ ಪ್ರೌಢಶಾಲೆಯಲ್ಲಿ ಶಿಕ್ಷಕರಿಂದ, ವಿದ್ಯಾರ್ಥಿಗಳಿಂದ ಲಂಚ ಭ್ರಷ್ಟಾಚಾರದ ವಿರುದ್ಧ ಘೋಷಣೆ

0

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ನಡೆಯುತ್ತಿರುವ ಲಂಚ ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಬೆಂಬಲವಾಗಿ ಎಡಮಂಗಲ ಸರಕಾರಿ ಪ್ರೌಢಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಘೋಷಣೆ ಕೂಗಿದರು. ಶಾಲಾ ಮುಖ್ಯೋಪಾಧ್ಯಾಯರಾದ ರಾಮಚಂದ್ರ ಕಜ್ಜೋಡಿ ಪ್ರಸ್ತಾವಿಕ ಮಾತುಗಳನ್ನಾಡಿದರು.

ಸುದ್ದಿ ಸಿಬ್ಬಂದಿ ಈಶ್ವರ ವಾರಣಾಶಿ ಆಂದೋಲನದ ಬಗ್ಗೆ ವಿವರಿಸಿದರು. ವಿದ್ಯಾರ್ಥಿ ನಾಯಕ ಘೋಷಣೆ ಕೂಗಿದರು. ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಘೋಷಣೆಯನ್ನು ಪುನರುಚ್ಚರಿಸಿದರು. ಸಹ ಶಿಕ್ಷಕಿಯರಾದ ಸವಿತಾ, ನಿರ್ಮಲಾಕ್ಷಿ ಪಿ, ಪೊಡಿಯ ಪಿ, ಸುದ್ದಿ ಸಿಬ್ಬಂದಿಗಳಾದ ಯತೀಶ್ ಕದ್ರ, ಬೃಂದಾ ಪೂಜಾರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.