ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಿವೃತ್ತ ನೌಕರರಿಗೆ ಬೀಳ್ಕೊಡುಗೆ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವಾ ನಿವೃತ್ತಿ ಹೊಂದಿದ ನೌಕರರಿಗೆ ಜೂ.೩೦ ರಂದು ಬೀಳ್ಕೊಡುಗೆ ಸಮಾರಂಭ ನಡೆಯಿತು. ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನಿವೃತ್ತರಾದ ಪುಷ್ಪಾವತಿ ನೂಚಿಲ ಮತ್ತು ಡಿ.ಸುಬ್ಬಕ್ಕ ದೇವರಗದ್ದೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.


ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ವಹಿಸಿದ್ದರು.
ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೋಭಾ ಗಿರಿಧರ್, ವನಜಾ.ವಿ.ಭಟ್, ಶ್ರೀ ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಅಭಿಯಂತರ ಉದಯ ಕುಮಾರ್ ಕೆ.ಸಿ ವೇದಿಕೆಯಲ್ಲಿದ್ದರು.


ದೇವಳದ ಸಿಬ್ಬಂಧಿ ಬಾಲಕೃಷ್ಣ ಆರ್ ಪ್ರಾರ್ಥನೆ ಹಾಡಿದರು. ದೇವಳದ ಅಭಿಯಂತರ ಉದಯ ಕುಮಾರ್ ಕೆ.ಸಿ ಸ್ವಾಗತಿಸಿದರು. ಪ್ರಮೀಳಾ ಅನಿಸಿಕೆ ವ್ಯಕ್ತಪಡಿಸಿದರು. ಯೋಗೀಶ್.ಎಂ.ವಿಟ್ಲ ವಂದಿಸಿದರು. ಮಹೇಶ್ ಕುಮಾರ್.ಎಸ್ ಅಗ್ರಹಾರ ಕಾರ್ಯಕ್ರಮ ನಿರೂಪಿಸಿದರು. ಶ್ರೀ ದೇವಳದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.