ಪುತ್ತೂರು: ಯಾದವ ಸಭಾ ವಾರ್ಷಿಕ ಮಹಾಸಭೆ – ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

0

ಪುತ್ತೂರಿನ ಯಾದವ ಸಭಾ ತಾಲೂಕು ಸಮಿತಿ, ಯುವ ವೇದಿಕೆ ಹಾಗೂ ಮಹಿಳಾ ವೇದಿಕೆಯ ವಾರ್ಷಿಕ ಮಹಾಸಭೆ , ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ ಕಾರ್ಯಕ್ರಮವು ಪುತ್ತೂರಿನ ಲಯನ್ಸ್ ಸೇವಾ ಮಂದಿರದಲ್ಲಿ ಜು.2ರಂದು ಜರುಗಿತು.

ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ಅವರು ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿ ಅಧ್ಯಕ್ಷ ಎ‌.ಕೆ. ಮಣಿಯಾಣಿ ಬೆಳ್ಳಾರೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರದಲ್ಲಿ ನಿವೃತ ಸೈನಿಕ ಸುಧಾನ ಬೆಳ್ಳಾರೆ ಹಾಗೂ ಗ್ರಂಥಾಲಯ ರಾಜ್ಯ ಪ್ರಶಸ್ತಿ ಪಡೆದ ಶ್ರೀಮತಿ ಸಾವಿತ್ರಿ ಕಣೆಮರಡ್ಕ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಯಾದವ ಸಭಾ ಕೇಂದ್ರ ಸಮಿತಿ ಸಲಹಾ ಮಂಡಳಿ ಅಧ್ಯಕ್ಷ ಸುಧಾಮ ಆಲೆಟ್ಟಿ, ಕೇಂದ್ರ ಸಮಿತಿ ಕೋಶಾಧಿಕಾರಿ ರಾಮಚಂದ್ರ ಯದುಗಿರಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಮಂಗಳೂರು ಯಾದವ ಸಭಾ ತಾಲೂಕು ಸಮಿತಿ ಅಧ್ಯಕ್ಷ ಕೃಷ್ಣ ಬಿ. ಪಡೀಲ್, ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್, ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಬೆಟ್ಟಂಪಾಡಿ – ನಿಡ್ಪಳ್ಳಿ ಪ್ರಾದೇಶಿಕ ಸಮಿತಿ ಅಧ್ಯಕ್ಷ ಕೊಗ್ಗು ಮಣಿಯಾಣಿ, ಕುರಿಂಜ ಪ್ರಾದೇಶಿಕ ಸಮಿತಿ ಅಧ್ಯಕ್ಷ ಲೋಕೇಶ ಕುಂಟಾಪು, ಪುತ್ತೂರು ಪ್ರಾದೇಶಿಕ ಸಮಿತಿ ಅಧ್ಯಕ್ಷ ದಾಮೋದರ ಮಣಿಯಾಣಿ ಸಂಪ್ಯ, ಪಾಣಾಜೆ ಪ್ರಾದೇಶಿಕ ಸಮಿತಿ ಅಧ್ಯಕ್ಷ ಧನಂಜಯ ಯಾದವ್ ಗೌರವ ಉಪಸ್ಥಿತರಿದ್ದರು.