ಪೆರುವಾಜೆ ಕಾಲೇಜು ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಹಿನ್ನೆಲೆ

0

ಕಾಲೇಜು ಜಂಟಿ ನಿರ್ದೇಶಕರ ಆಗಮನ – ವಾರದೊಳಗೆ ಕ್ರಮದ ಭರವಸೆ – ಪ್ರತಿಭಟನೆ ಹಿಂತೆಗೆತ

ಉಪನ್ಯಾಸಕಿಯೋರ್ವರು ಕಾಲೇಜು ವಿದ್ಯಾರ್ಥಿ ವಿರುದ್ಧ ಸುಳ್ಳು ದೂರು ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟಿಸಿದ ಬೆಳ್ಳಾರೆಯ ಪೆರುವಾಜೆ ಪದವಿ ಕಾಲೇಜಿಗೆ ಜಂಟಿ ನಿರ್ದೇಶಕರು ಆಗಮಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿದೆ.

ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುನಿತಾ ರವರು ಎಂ.ಕಾಂ. ವಿದ್ಯಾರ್ಥಿ ದೀಕ್ಷಿತ್ ವಿರುದ್ಧ ಪೊಲೀಸ್ ಠಾಣೆಗೆ ಸುಳ್ಳು ದೂರು ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಕಾಲೇಜು ಪ್ರವೇಶ ದ್ವಾರದ ಬಳಿ ಧರಣಿ ನಡೆಸಿ ಉಪನ್ಯಾಸಕಿ ವಿರುದ್ಧ ಘೋಷಣೆ ಕೂಗಿ ಪ್ರತಭಟಿಸಿದ್ದರು. ಮೇಲಧಿಕಾರಿಗಳು ಬರುವಂತೆ ಪಟ್ಟು ಹಿಡಿದಿದ್ದರು‌. ಮೇಲಧಿಕಾರಿಗಳು ಬಂದು ಕ್ರಮ ಕೈಗೊಳ್ಳುವ ವರೆಗೆ ಅನಿರ್ದಿಷ್ಟಾವಧಿ ಧರಣಿ , ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದರು.

ಇಂದು ಸಂಜೆ ಕಾಲೇಜು ವಿಭಾಗದ ಜಿಲ್ಲ ಜಂಟಿ ನಿರ್ದೇಶಕರಾದ ರಾಮೇ ಗೌಡರವರು ಕಾಲೇಜಿಗೆ ಬಂದು ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಿಸಿ ಬಳಿಕ ಪ್ರಾಂಶುಪಾಲರು ಹಾಗೂ ಉಪನ್ಯಾಸಕಿಯ ಜೊತೆ ಮಾತುಕತೆ ನಡೆಸಿದರು. ಈ ಬಗ್ಗೆ ಮೇಲಧಿಕಾರಿಗಳಿಗೆ ತಿಳಿಸಿ ಒಂದು ವಾರದೊಳಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಮೇರೆಗೆ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂತೆಗೆದುಕೊಂಡಿರುವುದಾಗಿ ತಿಳಿದುಬಂದಿದೆ.