ಮೇನಾಲ ಶಾಲೆ ಅಕ್ಷರ ದಾಸೋಹ ಕೊಠಡಿಗೆ ಅನುದಾನಕ್ಕಾಗಿ ಶಿಕ್ಷಣ ಸಚಿವರಿಗೆ ಮನವಿ

0

ಅಜ್ಜಾವರ ಗ್ರಾಮದ ಮೇನಾಲ ಕಿರಿಯ ಶಾಲೆಯಲ್ಲಿ ಅಕ್ಷರ ದಾಸೋಹ ಕೊಠಡಿ ನಿರ್ಮಾಣಕ್ಕೆ ಅನುದಾನ ಒದಗಿಸಬೇಕಾಗಿ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ರಂಜಿತ್ ರೈ ಮೇನಾಲ, ಮೇನಾಲ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಶೌಕತ್ ಅಲಿ‌ ಯವರು ಶಿಕ್ಷಣ ಸಚಿವ ಮಧು ಬಂಗಾರಪ್ಪರಿಗೆ ಮನವಿ ಮಾಡಿ ವಿನಂತಿಸಿಕೊಂಡಿದ್ದಾರೆ.


ವಿಧಾನ ಪರಿಷತ್ ಸದಸ್ಯ‌ ಮಂಜುನಾಥ್ ಭಂಡಾರಿಯವರ ಶಿಫಾರಸಿನ ಮೇರೆಗೆ ಮನವಿ ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಯತೀಶ್ ಮೇನಾಲ, ಸಿಹಾಬ್ ಮೇನಾಲ ಉಪಸ್ಥಿತರಿದ್ದರು.