ರಾತ್ರಿಯಿಂದಲೇ ಧಾರಾಕಾರ ಮಳೆ

0

ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ನಿನ್ನೆ ರಾತ್ರಿಯಿಂದಲೇ ತಾಲೂಕಿನಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಈಗಾಗಲೇ ಶಾಲಾ ಕಾಲೇಜುಗಳಿಗೆ ಸತತ ಎರಡನೇ ದಿನವೂ ರಜೆ ಸಾರಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಇಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.

ಸುಳ್ಯದ ಹಲವು ಕಡೆ ತಗ್ಗು ಪ್ರದೇಶಗಳು ಜಲಾವೃತಗೊಂಡ ವರದಿಗಳು ಬರುತ್ತಿದೆ. ವಿಶೇಷವಾಗಿ ಕಳೆದ ಕೆಲವು ವರ್ಷಗಳಿಂದ ಪ್ರಕೃತಿ ದುರಂತ ಸಂಭವಿಸುವ ಸ್ಥಳಗಳ ಜನ ಆತಂಕಿತರಾಗಿದ್ದಾರೆ.