ಸುಬ್ರಹ್ಮಣ್ಯ ಲಯನ್ಸ್ ಕ್ಲಬ್‌ ವತಿಯಿಂದ ಹರಿಹರ ಪಲ್ಲತ್ತಡ್ಕ ಶಾಲೆಯಲ್ಲಿ ವನಮಹೋತ್ಸವ

0

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್‌ ವತಿಯಿಂದ ಜು.11 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕ ಇಲ್ಲಿ ವನಮಹೋತ್ಸವ ನಡೆಸಲಾಯಿತು.

ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್‌ನ ಅಧ್ಯಕ್ಷ ರಾಮಚಂದ್ರ ಪಳಂಗಾಯ ವಹಿಸಿದ್ದರು.


ವೇದಿಕೆಯಲ್ಲಿ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ಸತೀಶ್ ಕೂಜುಗೋಡು, ಕೋಶಾಧಿಕಾರಿ ಚಂದ್ರಶೇಖರ ಪಾನತ್ತಿಲ, ನಿಕಟ ಪೂರ್ವಾಧ್ಯಕ್ಷ ರಂಗಯ್ಯ ಶೆಟ್ಟಿಗಾರ್, ಆರ್ ಎಫ್ ಮನೋಜ್, ಎಸ್ ಡಿ ಸಿ ಅಧ್ಯಕ್ಷ ಪದ್ಮನಾಭ ಕಲ್ಕುದಿ, ಶಾಲಾ ಮುಖ್ಯೋಪಾಧ್ಯಾಯ ಶೇಷಪ್ಪ ಗೌಡ ಉಪಸ್ಥಿತರಿದ್ದರು.


ಈ ಸಂದರ್ಭ ಸಭೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಇದರ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಪೋಷಕರು, ಎಸ್ ಡಿ ಎಂ ಸಿ ಇದರ ಎಲ್ಲಾ ಪದಾಧಿಕಾರಿಗಳು, ಅರಣ್ಯ ಇಲಾಖಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು. ಸತೀಶ್ ಕೂಜುಗೋಡು ಸ್ವಾಗತಿಸಿ, ಚಂದ್ರಶೇಖರ ಪಾನತ್ತಿಲ್ಲ ಧನ್ಯವಾದ ಮಾಡಿದರು. ಭಾರತಿ ದಿನೇಶ್ ಕಾರ್ಯಕ್ರಮ ನಿರೂಪಿಸಿದರು.