ಮೃತ ಪಟ್ಟ ಕೂಲಿ ಕಾರ್ಮಿಕನ ಅಂತ್ಯ ಸಂಸ್ಕಾರ ನೆರವೇರಿಸಿದ ಸುಳ್ಯದ ಭಜರಂಗದಳ ಕಾರ್ಯಕರ್ತರು

0

ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕೂಲಿ ಕಾರ್ಮಿಕರೋರ್ವರು ನಿಧನರಾಗಿದ್ದು ಮೃತರ ಅಂತ್ಯ ಸಂಸ್ಕಾರವನ್ನು ಸುಳ್ಯ ಭಜರಂಗದಳ ಸಂಘಟನೆಯ ಕಾರ್ಯಕರ್ತರು ನೆರವೇರಿಸಿದ ಘಟನೆ ಇಂದು ವರದಿಯಾಗಿದೆ.

ಮೂಲತ: ಧರ್ಮಸ್ಥಳದ ಕೊಕ್ಕಡದ ನಾಗಪ್ಪ ಎಂಬವರು ಸುಳ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದರು. ಅಸಹಾಯಕರಾಗಿದ್ದ ಅವರ ಮನೆಯವರ ಪರಿಸ್ಥಿತಿಯನ್ನು ಮನಗಂಡ ಸುಳ್ಯದ ಭಜರಂಗದಳ ಕಾರ್ಯಕರ್ತರು ಮೃತ ವ್ಯಕ್ತಿಯ ಅಂತ್ಯ ಸಂಸ್ಕಾರ ಕಾರ್ಯವನ್ನು ಜಯನಗರದ ಸ್ಮಶಾನದಲ್ಲಿ ನೆತವೇರಿಸುವ ಮೂಲಕ ಮಾನವೀಯತೆ ಮೆರೆದರು.