ದೆಹಲಿಯಲ್ಲಿ ನಡೆದ ಸಹಕಾರ ಸಂಘಗಳ ಮಹಾಸಂಗೋಷ್ಠಿ -2023 ರಲ್ಲಿ ಅರಂತೋಡಿನ ಸಹಕಾರಿಗಳು ಭಾಗಿ

0


ದೆಹಲಿಯ ವಿಜ್ಞಾನ ಭವನದಲ್ಲಿ ಜು.21ರಂದು ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಸರಕಾರದ ಎಲ್ಲಾ ಯೋಜನೆಗಳನ್ನು ಏಕಗವಾಕ್ಷಿ ಮೂಲಕ ಒದಗಿಸುವ ಸಲುವಾಗಿ ಸಾಮಾನ್ಯ ಸೇವಾಕೇಂದ್ರಗಳನ್ನು ಉದ್ಘಾಟಿಸಲಾಯಿತು.

ಕೇಂದ್ರ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಯನ್ನು
ಕೇಂದ್ರ ಸರ್ಕಾರದ ಗೃಹ ಹಾಗು ಸಹಕಾರ ಸಚಿವರಾದ ಅಮಿತ್ ಶಾ ರವರು ಉದ್ಘಾಟಿಸಿದರು. ಸಮಾರಂಭದಲ್ಲಿ ಕೇಂದ್ರ ಐಟಿಬಿಟಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಸಹಕಾರ ರಾಜ್ಯ ಸಚಿವ ಬಿ ಎಲ್. ವರ್ಮ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷರಾದ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಾಣಾಧಿಕಾರಿ ವಾಸುದೇವ ನಾಯಕ್ ಭಾಗವಹಿಸಿದ್ದರು.

ಈ ಯೋಜನೆ a ಆರಂತೋಡು – ತೊಡಿಕಾನ ಸಹಕಾರಿ ಸಂಘಕ್ಕೆ ಈಗಾಗಲೇ ಮಂಜೂರಾಗಿದ್ದು, ಸದ್ಯದಲ್ಲೇ ನಾಗರಿಕರ ಉಪಯೋಗಕ್ಕೆ ಲಭ್ಯವಾಗಲಿದೆ.