ಆಲೆಟ್ಟಿ ಯಾದವ ಸಭಾ ಪ್ರಾದೇಶಿಕ ಸಮಿತಿಯ ವಾರ್ಷಿಕ ಮಹಾಸಭೆ

0


ಯಾದವ ಸಭಾ ಪ್ರಾದೇಶಿಕ ಸಮಿತಿ ಆಲೆಟ್ಟಿ ಇದರ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಜು. ೨೨ರಂದು ಆಲೆಟ್ಟಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಆಲೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಲಹಾ ಸಮಿತಿ ಅಧ್ಯಕ್ಷರಾದ ಸುಧಾಮ ಆಲೆಟ್ಟಿ ಯವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಸಮಿತಿ ನಿಕಟಪೂರ್ವ ಅಧ್ಯಕ್ಷರಾದ ಕಣಕ್ಕೂರು ಕೊರಗಪ್ಪ ಮಾಸ್ತರ್, ತಾಲೂಕು ಸಮಿತಿ ಸದಸ್ಯರಾದ ಅಚ್ಚುತ ಮಣಿಯಾಣಿ ಆಲೆಟ್ಟಿ, ತಾಲೂಕು ಮಹಿಳಾ ವೇದಿಕೆ ಕಾರ್ಯದರ್ಶಿ ಶ್ರೀಮತಿ ಚಂಚಲಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.


ಸಭೆಯಲ್ಲಿ ದಿ.ಕಣಕ್ಕೂರು ಕು೦ಞ ಕಣ್ಣ ಮಣಿಯಾಣಿ ಮತ್ತು ದಿ. ಕಣಕ್ಕೂರು ಚೋಯಿಚ್ಚಿ ಅಮ್ಮ ದತ್ತು ನಿಧಿ ಪುರಸ್ಕಾರವನ್ನು ಎಸೆಸೆಲ್ಸಿಯಲ್ಲಿ ಗರಿಷ್ಠ ಅಂಕ ಪಡೆದ ಇಂಚರ ಪಿಆರ್.ರಿಗೆ ನೀಡಲಾಯಿತು ಮತ್ತು ಪಿಯುಸಿ ಹಾಗೂ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು .
ಈ ಸಂದರ್ಭದಲ್ಲಿ ಸರಕಾರಿ ಸಹಾಯಕ ಅಭಿಯೋಜಕರಾಗಿ ನೇಮಕಗೊಂಡ ಪ್ರಾದೇಶಿಕ ಸಮಿತಿಯ ಸದಸ್ಯರಾದ ಮನೋಜ್ ಕುಮಾರ್ ಕೊಯಿಂಗಾಜೆ ಇವರನ್ನು ಅಭಿನಂದಿಸಲಾಯಿತು. ಪ್ರಾದೇಶಿಕ ಸಮಿತಿಯ ಉಪಾಧ್ಯಕ್ಷ ಮಾಲಿಂಗನ್ ಕಣಕ್ಕೂರು ಸ್ವಾಗತಿಸಿದರು. ಕೋಶಾಧಿಕಾರಿ ರಾಜಶೇಖರ್ ಕಣಕೂರು ವರದಿ ಮತ್ತು ಲೆಕ್ಕಪತ್ರ ಮಂಡನೆ ಮಾಡಿದರು. ಸಮಿತಿ ಕಾರ್ಯದರ್ಶಿ ಸೀತಾರಾಮ ಕಣಕ್ಕೂರು ಧನ್ಯವಾದ ಸಮರ್ಪಣೆ ಮಾಡಿದರು. ಪ್ರವೀಣ ಆಲೆಟ್ಟಿ ಪ್ರಾರ್ಥನೆ ಮತ್ತು ಕಾರ್ಯಕ್ರಮದ ರೂಪಿಸಿದರು.