ನಿರಂತರ ಮಳೆಗೆ ಕೆಸರುಮಯವಾದ ಚೊಕ್ಕಾಡಿ- ಅಮೆಬೈಲು ರಸ್ತೆ

0

ರಸ್ತೆ ದುರಸ್ತಿಗಾಗಿ ಸ್ಥಳೀಯರಿಂದ ಆಗ್ರಹ

ಅಮರಪಡ್ನೂರು ಗ್ರಾಮದ ಚೊಕ್ಕಾಡಿಯಿಂದ ಅಮೆಬೈಲುಗೆ ಹೋಗುವ ರಸ್ತೆಯು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೆಸರುಮಯವಾಗಿದ್ದು, ದುರಸ್ಥಿಗಾಗಿ ಸ್ಥಳೀಯರು ಆಗ್ರಹಿಸಿದ್ದಾರೆ. ರಸ್ತೆ ಕೆಸರುಮಯವಾದ ಕಾರಣ ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರಿಗೆ ನಡೆದಾಡಲೂ ಕಷ್ಟಕರವಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ರಸ್ತೆಯನ್ನು ಆದಷ್ಟು ಶೀಘ್ರವಾಗಿ ದುರಸ್ತಿಪಡಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕಳೆದ ಬಾರಿಯೂ ಈ ರಸ್ತೆ ವಿಪರೀತ ಮಳೆಗೆ ಕೆಸರುಮಯವಾಗಿದ್ದ ಸಂದರ್ಭದಲ್ಲಿ ಗ್ರಾಮದವರ ಸಹಾಯಯೊಂದಿಗೆ ಪ್ರತಿ ಮನೆಯಿಂದ ಹಣ ಸಂಗ್ರಹ ಮಾಡಿ ,ಚರಳು ಕಲ್ಲು ಹಾಕಿ ತಾತ್ಕಾಲಿಕವಾಗಿ ರಸ್ತೆ ದುರಸ್ತಿಪಡಿಸಲಾಗಿತ್ತು.

ಆದರೆ ಇತ್ತೀಚಿನ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಸ್ತೆ ಮತ್ತೆ ಕೆಲಸರುಮಯಗೊಂಡಿದೆ. ಈ ರಸ್ತೆಯಲ್ಲಿ ಘನ ವಾಹನಗಳು ಕೂಡಾ ಸಂಚರಿಸಿರಿರುವುದರಿಂದ ರಸ್ತೆ ತೀರಾ ಹದಗೆಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಇದಕ್ಕೆ ಸ್ಥಳೀಯ ಗ್ರಾಮ ಪಂಚಾಯತ್ ನವರು ಸ್ಪಂದಿಸಿ ಸಮಸ್ಯೆಯನ್ನು ಪರಿಹರಿಸಬೇಕೆಂದು ಊರವರು ಆಗ್ರಹಿಸಿದ್ದಾರೆ.