ಸುಳ್ಯ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದಿಂದ ಬಿಎಂಎಸ್ ಸಂಸ್ಥಾಪನಾ ದಿನಾಚರಣೆ

0

ಭಾರತೀಯ ಮಜ್ದೂರ್ ಸಂಘ ಸುಳ್ಯ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ಸುಳ್ಯ ತಾಲೂಕು ಇದರ ವತಿಯಿಂದ ಬಿಎಂಎಸ್ ಸ್ಥಾಪನಾ ದಿನಾಚರಣೆ ಹಾಗೂ ಕಾರ್ಮಿಕರ ಗುರುತಿನ ಚೀಟಿ ವಿತರಣೆ ಹಾಗೂ ಹಿರಿಯ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಸುಳ್ಯದ ಅಮೃತ ಭವನದಲ್ಲಿ ಜು.23 ರಂದು ನಡೆಯಿತು.

ಸುಳ್ಯದ ಶಾಸಕರಾದ ಭಾಗೀರಥಿ ಮುರುಳ್ಯ ಹಾಗೂ ಮಾಜಿ ಸಚಿವರು ಎಸ್ ಅಂಗಾರ ಹಾಗೂ ಬಿ ಎಂ ಎಸ್ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ವಿಶ್ವನಾಥ ಶೆಟ್ಟಿ ಹಾಗೂ ಪಿ.ಕೆ.ಉಮೇಶ್ ಹಾಗೂ ಬಿ.ಎಂ.ಎಸ್ ಜಿಲ್ಲಾಧ್ಯಕ್ಷರಾದ ಅನಿಲ್ ಕುಮಾರ್ ನ್ಯಾಯವಾದಿಗಳು ಹಾಗೂ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಜಯರಾಜ್ ಸಾಲಿಯಾನ್ ಹಾಗೂ ಬಿ ಎಂ ಎಸ್ ಜಿಲ್ಲಾ ಕಾರ್ಯದರ್ಶಿ ಗೋಪಾಲಕೃಷ್ಣ ಹಾಗೂ ಬಿ ಎಂ ಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರನಾಥ ಶೆಟ್ಟಿ ಹಾಗೂ ಬಿ ಎಂ ಎಸ್ ಜಿಲ್ಲಾ ಉಪಾಧ್ಯಕ್ಷ ಗಣೇಶ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.


ಬಿ ಎಂ ಎಸ್ ಸುಳ್ಯ ತಾಲೂಕು ಸಂಚಾಲಕ ಮಧುಸೂದನ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು.
ಹಿರಿಯ ಕಾರ್ಮಿಕರಾದ ಅಪ್ಪಯ್ಯ ಆಚಾರ್ಯ ಹಾಗೂ ಸ್ವಾಮಿನಾಥನ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಎಲ್ಲಾ ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ವಿತರಿಸಲಾಯಿತು.
ಮೋನಪ್ಪ ಜಯನಗರ ವಂದನೆಗಳನ್ನು ಸಲ್ಲಿಸಿದರು.