ಲಂಚ ಭ್ರಷ್ಟಾಚಾರ ನಿರ್ಮೂಲನ ಆಂದೋಲನಕ್ಕೆ ಸುಳ್ಯ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಅಧ್ಯಕ್ಷರಿಂದ ಬೆಂಬಲ ಸೂಚನೆ

0

ಸುದ್ದಿ ಸಮೂಹ ಸಂಸ್ಥೆ ಹಮ್ಮಿಕೊಂಡಿರುವ ಲಂಚ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಹಾಗೂ ಜನಾಂದೋಲನ ಕಾರ್ಯಕ್ರಮಕ್ಕೆ ಸುಳ್ಯ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಸಮಿತಿಯ ಅಧ್ಯಕ್ಷ ಅಬ್ದುಲ್ ರಹಿಮಾನ್ ಎಸ್ ವೈ ಬೆಂಬಲ ಸೂಚಿಸಿದ್ದಾರೆ.
ಅವರು ಕುರುಂಜಿ ಬಾಗಿನಲ್ಲಿ ಕಾರ್ಯಚರಿಸುತ್ತಿರುವ ತಮ್ಮ ಸಂಸ್ಥೆಯಲ್ಲಿ ಆಂದೋಲನದ ಫಲಕವನ್ನು ಅಳವಡಿಸಿ ಆಂದೋಲನಕ್ಕೆ ಕೈಜೋಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಸುದ್ದಿ ಪತ್ರಿಕೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಸಾರ್ವಜನಿಕರಿಗೆ ವರವಾಗಿದೆ. ಪ್ರತಿಯೊಬ್ಬರು ಲಂಚ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವಂತಾಗಬೇಕು. ಆಗಿದ್ದಲ್ಲಿ ಉತ್ತಮ ಸಮಾಜ ಮತ್ತು ಉತ್ತಮ ರಾಜ್ಯ ಹಾಗೂ ಉತ್ತಮ ದೇಶವನ್ನು ಕಟ್ಟಲು ಸಾಧ್ಯ ಎಂದು ಹೇಳಿದರು.